ಐಪಿಎಲ್‌ 2023 | ಗಿಲ್‌ ಶತಕದಬ್ಬರ; ಮಕಾಡೆ ಮಲಗಿದ ಮುಂಬೈ; ಫೈನಲ್‌ಗೆ ಗುಜರಾತ್‌

Date:

Advertisements

ಗುಜರಾತ್‌ ಟೈಟನ್ಸ್‌ ತಂಡ ಸತತ ಎರಡನೇ ಬಾರಿಗೆ ಐಪಿಎಲ್‌ ಟೂರ್ನಿಯ ಫೈನಲ್‌ ಪ್ರವೇಶಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಕ್ವಾಲಿಫೈಯರ್​-2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 62 ರನ್‌ಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಹಾ‌ರ್ದಿಕ್‌ ಪಾಂಡ್ಯ ಪಡೆ ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆದಿದೆ.

ಮೇ 29, ಭಾನುವಾರದಂದು ಇದೇ ಮೈದಾನದಲ್ಲಿ, ಐಪಿಎಲ್‌ 16ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕಾಗಿ ನಡೆಯುವ ಫೈನಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಸವಾಲನ್ನು ಗುಜರಾತ್ ಎದುರಿಸಬೇಕಿದೆ.‌

ಮಂಗಳವಾರ ನಡೆದ ಕ್ವಾಲಿಪೈಯರ್​-1 ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ, ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು 15 ರನ್‌ಗಳ ಅಂತರದಲ್ಲಿ ಶರಣಾಗಿತ್ತು.

Advertisements

ಚೆನ್ನೈನಲ್ಲಿ ನಡೆದ ಕ್ವಾಲಿಪೈಯರ್​-1 ಪಂದ್ಯದ ಪುನರಾವರ್ತನೆ ಎಂಬಂತೆ ಮೇ 29ರಂದು ಅಹಮದಾಬಾದ್‌ನ ನರೇಂದ್ರವ ಮೋದಿ ಸ್ಟೇಡಿಯಂನಲ್ಲಿ ಫೈನಲ್‌ ನಡೆಯಲಿದೆ.

ಗಿಲ್‌ ಶತಕದಬ್ಬರದ ಎದುರು ಮಂಕಾದ ಮುಂಬೈ ಇಂಡಿಯನ್ಸ್‌

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆತಿಥೇಯ ಗುಜರಾತ್‌ ಟೈಟನ್ಸ್‌, ಆರಂಭಿಕ ಬ್ಯಾಟರ್‌ ಶುಭಮನ್‌ ಗಳಿಸಿದ ಸ್ಪೋಟಕ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟದಲ್ಲಿ 233 ರನ್‌ ಗಳಿಸಿತ್ತು. ಆದರೆ ಕಠಿಣ ಗುರಿ ಬೆನ್ನಟ್ಟುವ ವೇಳೆ 18.2 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ 62 ರನ್‌ಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ನರಿಗೆ ಶರಣಾಯಿತು.

ಒಂದೇ ಆವೃತ್ತಿಯಲ್ಲಿ ಗಿಲ್ ಮೂರನೇ ಶತಕ; 49 ಎಸೆತಗಳಲ್ಲಿ ಶತಕ ಪೂರ್ತಿಗೊಳಿಸಿದ ಶುಭಮನ್‌ ಗಿಲ್‌, ಆ ಬಳಿಕವೂ ಬಿರುಸಿನ ಬ್ಯಾಟಿಂಗ್​ ಮುಂದುವರೆಸಿದರು. 60 ಎಸೆತಗಳಲ್ಲಿ 129 ರನ್​ ಗಳಿಸಿದ್ದ ವೇಳೆ ಆಕಾಶ್‌ ಮಧ್ವಾಲ್‌ ಬೌಲಿಂಗ್‌ನಲ್ಲಿ ಡೇವಿಡ್‌ಗೆ ಕ್ಯಾಚಿತ್ತು ವಿಕೆಟ್‌ ಒಪ್ಪಿಸಿದರು. ಗಿಲ್ಇ‌ ಇನ್ನ್ನಿಂನಿಂಗ್ಗ್ 10 ಸಿಕ್ಸರ್​ ಮತ್ತು 7 ಬೌಂಡರಿಗಳನ್ನು ಒಳಗೊಂಡಿತ್ತು. ಪ್ರಸಕ್ತ ಐಪಿಎಲ್‌ ಆವೃತ್ತಿಯಲ್ಲಿ ಗಿಲ್‌ ದಾಖಲಿಸಿದ ಮೂರನೇ ಶತಕ ಇದಾಗಿದೆ. 16ನೇ ಆವೃತ್ತಿಯಲ್ಲಿ 16 ಪಂದ್ಯಗಳಿಂದ 821 ರನ್​ ಒಟ್ಟುಗೂಡಿಸಿದ ಶುಭಮನ್‌, ಆರೆಂಜ್​ ಕ್ಯಾಪ್‌ಅನ್ನು ತನ್ನದಾಗಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X