ಐಪಿಎಲ್‌ 2023 | ರಾಜಸ್ಥಾನ ವಿರುದ್ಧ ಆರ್‌ಸಿಬಿಗೆ 112 ರನ್‌ ಜನ; ಪ್ಲೇ ಆಫ್‌ ಆಸೆ ಜೀವಂತ

Date:

  • ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್‌ ಮರೆದ ರಾಜಸ್ಥಾನ
  • ರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇ ಆಫ್‌ ಆಸೆ ಜೀವಂತವಾಗಿರಿಸಿದೆ. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ  112 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆರ್‌ಸಿಬಿ, ನಾಯಕ ಡುಪ್ಲೆಸ್ಸಿಸ್‌ ಮತ್ತು ಮ್ಯಾಕ್ಸ್‌ವೆಲ್‌ ಗಳಿಸಿದ ಅರ್ಧಶತಕಗಳ ನೆರವಿನಿಂದ 5 ವಿಕೆಟ್‌ ನಷ್ಟದಲ್ಲಿ 171 ರನ್‌ ಗಳಿಸಿತ್ತು. ಆದರೆ ಚೇಸಿಂಗ್‌ ವೇಳೆ ಪೆವಿಲಿಯನ್‌ ಪರೇಡ್‌ ನಡೆಸಿದ ಆತಿಥೇಯ ತಂಡ 10.3 ಓವರ್‌ಗಳಲ್ಲಿ ಕೇವಲ 59 ರನ್‌ ಗಳಿಸುವಷ್ಟರಲ್ಲಿ ಆಲೌಟ್‌ ಆಯಿತು.

ಈ ಗೆಲುವಿನೊಂದಿಗೆ ಆರ್‌ಸಿಬಿ, ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. 12 ಪಂದ್ಯಗಳನ್ನಾಡಿರುವ ಡುಪ್ಲೆಸ್ಸಿಸ್‌ ಪಡೆ 12 ಅಂಕಗಳನ್ನು ಹೊಂದಿದೆ. ಲೀಗ್‌ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ಸನ್‌ರೈಸರ್ಸ್‌ ಹೈದರಬಾದ್‌ ಮತ್ತು ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡಗಳನ್ನು ಆರ್‌ಸಿಬಿ ಎದುರಿಸಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಎರಡೂ ಪಂದ್ಯಗಳನ್ನು ಗೆದ್ದರೂ ಸಹ, ಪ್ಲೇ ಆಫ್‌ ಪ್ರವೇಶಿಸಲು ಉಳಿದ ತಂಡಗಳ ಫಲಿತಾಂಶಗಳೂ ಸಹ ಆರ್‌ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯವಾಗಿದೆ. ಈಗಾಗಲೇ 13 ಪಂದ್ಯಗಳನ್ನು ಮುಗಿಸಿರುವ ಆರ್‌ಆರ್‌ ಬಳಿ 12 ಅಂಕಗಳಿವೆ. ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಗೆದ್ದರೂ ಸಹ 14 ಅಂಕಗಳನ್ನು ಹೊಂದಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...