ಐಪಿಎಲ್‌ 2023 | ರಾಜಸ್ಥಾನ ವಿರುದ್ಧ ಆರ್‌ಸಿಬಿಗೆ 112 ರನ್‌ ಜನ; ಪ್ಲೇ ಆಫ್‌ ಆಸೆ ಜೀವಂತ

Date:

Advertisements
  • ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್‌ ಮರೆದ ರಾಜಸ್ಥಾನ
  • ರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇ ಆಫ್‌ ಆಸೆ ಜೀವಂತವಾಗಿರಿಸಿದೆ. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ  112 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆರ್‌ಸಿಬಿ, ನಾಯಕ ಡುಪ್ಲೆಸ್ಸಿಸ್‌ ಮತ್ತು ಮ್ಯಾಕ್ಸ್‌ವೆಲ್‌ ಗಳಿಸಿದ ಅರ್ಧಶತಕಗಳ ನೆರವಿನಿಂದ 5 ವಿಕೆಟ್‌ ನಷ್ಟದಲ್ಲಿ 171 ರನ್‌ ಗಳಿಸಿತ್ತು. ಆದರೆ ಚೇಸಿಂಗ್‌ ವೇಳೆ ಪೆವಿಲಿಯನ್‌ ಪರೇಡ್‌ ನಡೆಸಿದ ಆತಿಥೇಯ ತಂಡ 10.3 ಓವರ್‌ಗಳಲ್ಲಿ ಕೇವಲ 59 ರನ್‌ ಗಳಿಸುವಷ್ಟರಲ್ಲಿ ಆಲೌಟ್‌ ಆಯಿತು.

ಈ ಗೆಲುವಿನೊಂದಿಗೆ ಆರ್‌ಸಿಬಿ, ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. 12 ಪಂದ್ಯಗಳನ್ನಾಡಿರುವ ಡುಪ್ಲೆಸ್ಸಿಸ್‌ ಪಡೆ 12 ಅಂಕಗಳನ್ನು ಹೊಂದಿದೆ. ಲೀಗ್‌ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ಸನ್‌ರೈಸರ್ಸ್‌ ಹೈದರಬಾದ್‌ ಮತ್ತು ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡಗಳನ್ನು ಆರ್‌ಸಿಬಿ ಎದುರಿಸಲಿದೆ.

Advertisements

ಈ ಎರಡೂ ಪಂದ್ಯಗಳನ್ನು ಗೆದ್ದರೂ ಸಹ, ಪ್ಲೇ ಆಫ್‌ ಪ್ರವೇಶಿಸಲು ಉಳಿದ ತಂಡಗಳ ಫಲಿತಾಂಶಗಳೂ ಸಹ ಆರ್‌ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯವಾಗಿದೆ. ಈಗಾಗಲೇ 13 ಪಂದ್ಯಗಳನ್ನು ಮುಗಿಸಿರುವ ಆರ್‌ಆರ್‌ ಬಳಿ 12 ಅಂಕಗಳಿವೆ. ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಗೆದ್ದರೂ ಸಹ 14 ಅಂಕಗಳನ್ನು ಹೊಂದಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X