ಐಪಿಎಲ್‌ 2023 | ಹೈದರಾಬಾದ್‌ ಗೆಲುವಿಗೆ 204 ರನ್‌ಗಳ ಕಠಿಣ ಗುರಿ

Date:

ಆರಂಭಿಕರಾದ ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಗಳಿಸಿದ ಅರ್ಧಶತಕಗಳ ಬಲದಲ್ಲಿ ಮಿಂಚಿದ ಸನ್​ರೈಸರ್ಸ್ ಹೈದರಾಬಾದ್, ಐಪಿಎಲ್‌ನ 4ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್  ತಂಡಕ್ಕೆ 204 ರನ್‌ಗಳ ಗೆಲುವಿನ ಗುರಿ ಮುಂದಿಟ್ಟಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದ ಆತಿಥೇಯ ತಂಡ, ರಾಯಲ್ಸ್‌ ಪಡೆಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಆದರೆ ಹೈದರಾಬಾದ್​ ಬೌಲಿಂಗ್‌ ಪಡೆಯನ್ನು ಧೂಳಿಪಟ ಮಾಡಿದ ರಾಯಲ್ಸ್‌ ಆರಂಭಿಕರು ಮೊದಲ 6 ಓವರ್‌ಗಳಲ್ಲೇ 85 ರನ್‌ಗಳಿಸಿದ್ದರು.

ಹೈದರಾಬಾದ್​ ವಿರುದ್ಧ ಕೇವಲ 20 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಅರ್ಧಶತಕ ಪೂರ್ತಿಗೊಳಿಸಿದ ಜಾಸ್‌ ಬಟ್ಲರ್‌, ಮತ್ತು ಜೈಸ್ವಾಲ್‌ ತಲಾ 54 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೂರನೇ ಕ್ರಮಾಂಕದಲ್ಲಿ ಬಂದ ನಾಯಕ ಸಂಜು ಸ್ಯಾಮ್ಸನ್‌ ಸಹ ಆರಂಭದಲ್ಲೇ ಬಿರುಸಿನ ಹೊಡೆತಗಳಿಗೆ ಮುಂದಾದರು. ಹೈದರಾಬಾದ್​ ವಿರುದ್ಧ 32 ಎಸೆತಗಳಲ್ಲಿ 4 ಬೌಂಡರಿ ಮತ್ತು 6 ಸಿಕ್ಸರ್‌ಗಳ ನೆರವಿನಿಂದ 55 ರನ್‌ಗಳಿಸಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮಾರ್ಕ್‌ವುಡ್‌ ಮಾರಕ ದಾಳಿಗೆ ಡೆಲ್ಲಿ ತತ್ತರ; ಲಖನೌ ತಂಡಕ್ಕೆ ಗೆಲುವು

19.5ನೇ ಓವರ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಶಿಮ್ರಾನ್ ಹೆಟ್ಮೆಯರ್ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಹೈದರಾಬಾದ್​ ವಿರುದ್ಧ ರಾಜಸ್ಥಾನ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟದಲ್ಲಿ 203 ರನ್‌ಗಳಿಸಿದೆ.

ಹೈದರಾಬಾದ್‌ ತಂಡದ ಪರ ಎಡಗೈ ವೇಗಿಗಳಾದ ಫಝಲ್‌ ಫಾರೂಖಿ ಮತ್ತು ಟಿ ನಟರಾಜನ್‌ ತಲಾ 2 ವಿಕೆಟ್‌ ಪಡೆದರು.

ಉಭಯ ತಂಡಗಳ ಆಡುವ ಹನ್ನೊಂದರ ಬಳಗ

ರಾಜಸ್ಥಾನ್ ರಾಯಲ್ಸ್; ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್

(ನಾಯಕ), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

ಸನ್‌ರೈಸರ್ಸ್ ಹೈದರಾಬಾದ್; ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್‌ (ವಿಕೆಟ್‌ ಕೀಪರ್), ಉಮ್ರಾನ್ ಮಲಿಕ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್(ನಾಯಕ), ಟಿ ನಟರಾಜನ್, ಫಝಲ್‌ ಹಖ್ ಫಾರೂಕಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್...

ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ....

ಐಪಿಎಲ್ | ಉಮೇಶ್ ಯಾದವ್ ಸಾಹಸ: ಮುಂಬೈ ವಿರುದ್ಧ ಗುಜರಾತ್‌ಗೆ 6 ರನ್‌ಗಳ ರೋಚಕ ಜಯ

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 5ನೇ...