ಐಪಿಎಲ್‌ 2023 | ಹೈದರಾಬಾದ್‌ ಗೆಲುವಿಗೆ 204 ರನ್‌ಗಳ ಕಠಿಣ ಗುರಿ

Date:

ಆರಂಭಿಕರಾದ ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಗಳಿಸಿದ ಅರ್ಧಶತಕಗಳ ಬಲದಲ್ಲಿ ಮಿಂಚಿದ ಸನ್​ರೈಸರ್ಸ್ ಹೈದರಾಬಾದ್, ಐಪಿಎಲ್‌ನ 4ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್  ತಂಡಕ್ಕೆ 204 ರನ್‌ಗಳ ಗೆಲುವಿನ ಗುರಿ ಮುಂದಿಟ್ಟಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದ ಆತಿಥೇಯ ತಂಡ, ರಾಯಲ್ಸ್‌ ಪಡೆಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಆದರೆ ಹೈದರಾಬಾದ್​ ಬೌಲಿಂಗ್‌ ಪಡೆಯನ್ನು ಧೂಳಿಪಟ ಮಾಡಿದ ರಾಯಲ್ಸ್‌ ಆರಂಭಿಕರು ಮೊದಲ 6 ಓವರ್‌ಗಳಲ್ಲೇ 85 ರನ್‌ಗಳಿಸಿದ್ದರು.

ಹೈದರಾಬಾದ್​ ವಿರುದ್ಧ ಕೇವಲ 20 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಅರ್ಧಶತಕ ಪೂರ್ತಿಗೊಳಿಸಿದ ಜಾಸ್‌ ಬಟ್ಲರ್‌, ಮತ್ತು ಜೈಸ್ವಾಲ್‌ ತಲಾ 54 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ಮೂರನೇ ಕ್ರಮಾಂಕದಲ್ಲಿ ಬಂದ ನಾಯಕ ಸಂಜು ಸ್ಯಾಮ್ಸನ್‌ ಸಹ ಆರಂಭದಲ್ಲೇ ಬಿರುಸಿನ ಹೊಡೆತಗಳಿಗೆ ಮುಂದಾದರು. ಹೈದರಾಬಾದ್​ ವಿರುದ್ಧ 32 ಎಸೆತಗಳಲ್ಲಿ 4 ಬೌಂಡರಿ ಮತ್ತು 6 ಸಿಕ್ಸರ್‌ಗಳ ನೆರವಿನಿಂದ 55 ರನ್‌ಗಳಿಸಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮಾರ್ಕ್‌ವುಡ್‌ ಮಾರಕ ದಾಳಿಗೆ ಡೆಲ್ಲಿ ತತ್ತರ; ಲಖನೌ ತಂಡಕ್ಕೆ ಗೆಲುವು

19.5ನೇ ಓವರ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಶಿಮ್ರಾನ್ ಹೆಟ್ಮೆಯರ್ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಹೈದರಾಬಾದ್​ ವಿರುದ್ಧ ರಾಜಸ್ಥಾನ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟದಲ್ಲಿ 203 ರನ್‌ಗಳಿಸಿದೆ.

ಹೈದರಾಬಾದ್‌ ತಂಡದ ಪರ ಎಡಗೈ ವೇಗಿಗಳಾದ ಫಝಲ್‌ ಫಾರೂಖಿ ಮತ್ತು ಟಿ ನಟರಾಜನ್‌ ತಲಾ 2 ವಿಕೆಟ್‌ ಪಡೆದರು.

ಉಭಯ ತಂಡಗಳ ಆಡುವ ಹನ್ನೊಂದರ ಬಳಗ

ರಾಜಸ್ಥಾನ್ ರಾಯಲ್ಸ್; ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್

(ನಾಯಕ), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

ಸನ್‌ರೈಸರ್ಸ್ ಹೈದರಾಬಾದ್; ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್‌ (ವಿಕೆಟ್‌ ಕೀಪರ್), ಉಮ್ರಾನ್ ಮಲಿಕ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್(ನಾಯಕ), ಟಿ ನಟರಾಜನ್, ಫಝಲ್‌ ಹಖ್ ಫಾರೂಕಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ...

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...