ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

Date:

Advertisements

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್ ಗೆಲುವಿನ ಆರಂಭ ಪಡೆದಿದೆ. ಅಹ್ಮದಾಬಾದ್‌ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾರ್ದಿಕ್‌ ಪಡೆ, ನಾಲ್ಕು 4 ಬಾರಿಯ ಚಾಂಪಿಯನ್​​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವವನ್ನು 5 ವಿಕೆಟ್‌ಗಳ ಅಂತರದಲ್ಲಿ ಮಣಿಸಿದೆ.

ಐಪಿಎಲ್‌ನಲ್ಲಿ ಈ ಬಾರಿ ಹೊಸದಾಗಿ ಪರಿಚಯಿಸಲಾಗಿರುವ ʻಇಂಪ್ಯಾಕ್ಟ್‌ ಪ್ಲೇಯರ್‌ʼ ಅವಕಾಶವನ್ನು ಬಳಸಿದ ಮೊದಲ ತಂಡ ಎಂಬ ಶ್ರೇಯವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನದಾಗಿಸಿಕೊಂಡಿದೆ.

ಕ್ಷೇತ್ರರಕ್ಷಣೆಯ ವೇಳೆ ಅಂಬಟಿ ರಾಯುಡು ಬದಲಾಗಿ ಮಧ್ಯಮ ವೇಗಿ ತುಷಾರ್​ ದೇಶಪಾಂಡೆ ಅವರನ್ನು ಕಣಕ್ಕಿಳಿಸಿತು. ಆ ಮೂಲಕ ತುಷಾರ್, ಐಪಿಎಲ್‌ನಲ್ಲಿ ಇತಿಹಾಸದಲ್ಲಿ ಮೊದಲ ‘ಇಂಪ್ಯಾಕ್ಟ್ ಪ್ಲೇಯರ್’ ಎನಿಸಿಕೊಂಡರು. ಇದಾದ ಬಳಿಕ ಗುಜರಾತ್​ ಟೈಟಾನ್ಸ್​, ಗಾಯಾಳು ಕೇನ್‌ ವಿಲಿಯಮ್ಸನ್‌ ಬದಲಿಗೆ ‘ಇಂಪ್ಯಾಕ್ಟ್ ಪ್ಲೇಯರ್’  ಆಗಿ ಸಾಯಿ ಸುದರ್ಶನ್ ಅವರನ್ನು ಸೇರಿಸಿಕೊಂಡಿತ್ತು.

ಇಂಪ್ಯಾಕ್ಟ್ ಆಗದ ಪ್ಲೇಯರ್ಸ್!​

ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಇಂಪ್ಯಾಕ್ಟ್‌ ಪ್ಲೇಯರ್‌ ಆಯ್ಕೆ ಶುಕ್ರವಾರ ಉಭಯ ತಂಡಗಳಿಗೂ ಪ್ರಯೋಜನವಾಗಲಿಲ್ಲ. ಚೆನ್ನೈ ಪರ 3.2 ಓವರ್ ಬೌಲಿಂಗ್​ ಮಾಡಿದ ದೇಶಪಾಂಡೆ, 51 ರನ್​ ನೀಡಿ ದುಬಾರಿಯಾದರು‌ ಕೇವಲ 1 ವಿಕೆಟ್‌ ಪಡೆಯಲಷ್ಟೇ ಶಕ್ತರಾದರು.

ಜಿಟಿ ತಂಡದಲ್ಲಿ ಸಾಯಿ ಸುದರ್ಶನ್​ ಸಹ ತಮಗೆ ಸಿಕ್ಕಿದ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲರಾದರು. 17 ಎಸೆತಗಳನ್ನು ಎದುರಿಸಿದ ಸುದರ್ಶನ್ 3 ಬೌಂಡರಿಗನ್ನೊಳಗೊಂಡ 22 ರನ್​ ಗಳಿಸಿದರು.‌

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಆರ್‌ಸಿಬಿ ಪಂದ್ಯದ ಟಿಕೆಟ್‌ಗಳಿಗೆ ತಡರಾತ್ರಿಯಿಂದಲೇ ಕಾದು ಕುಳಿತ ಅಭಿಮಾನಿಗಳು

ಚೆನ್ನೈ ತಂಡದ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿದ್ದವರು; ತುಷಾರ್​ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ ಹಾಗೂ ನಿಶಾಂತ್ ಸಿಂಧು.

ಗುಜರಾತ್ ತಂಡದ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿದ್ದವರು;‌ ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆ ಎಸ್ ಭಾರತ್ ಜೊತೆಗೆ ಬಿ ಸಾಯಿ ಸುದರ್ಶನ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Download Eedina App Android / iOS

X