ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್ ಗೆಲುವಿನ ಆರಂಭ ಪಡೆದಿದೆ. ಅಹ್ಮದಾಬಾದ್‌ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾರ್ದಿಕ್‌ ಪಡೆ, ನಾಲ್ಕು 4 ಬಾರಿಯ ಚಾಂಪಿಯನ್​​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವವನ್ನು 5 ವಿಕೆಟ್‌ಗಳ ಅಂತರದಲ್ಲಿ ಮಣಿಸಿದೆ.

ಐಪಿಎಲ್‌ನಲ್ಲಿ ಈ ಬಾರಿ ಹೊಸದಾಗಿ ಪರಿಚಯಿಸಲಾಗಿರುವ ʻಇಂಪ್ಯಾಕ್ಟ್‌ ಪ್ಲೇಯರ್‌ʼ ಅವಕಾಶವನ್ನು ಬಳಸಿದ ಮೊದಲ ತಂಡ ಎಂಬ ಶ್ರೇಯವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನದಾಗಿಸಿಕೊಂಡಿದೆ.

ಕ್ಷೇತ್ರರಕ್ಷಣೆಯ ವೇಳೆ ಅಂಬಟಿ ರಾಯುಡು ಬದಲಾಗಿ ಮಧ್ಯಮ ವೇಗಿ ತುಷಾರ್​ ದೇಶಪಾಂಡೆ ಅವರನ್ನು ಕಣಕ್ಕಿಳಿಸಿತು. ಆ ಮೂಲಕ ತುಷಾರ್, ಐಪಿಎಲ್‌ನಲ್ಲಿ ಇತಿಹಾಸದಲ್ಲಿ ಮೊದಲ ‘ಇಂಪ್ಯಾಕ್ಟ್ ಪ್ಲೇಯರ್’ ಎನಿಸಿಕೊಂಡರು. ಇದಾದ ಬಳಿಕ ಗುಜರಾತ್​ ಟೈಟಾನ್ಸ್​, ಗಾಯಾಳು ಕೇನ್‌ ವಿಲಿಯಮ್ಸನ್‌ ಬದಲಿಗೆ ‘ಇಂಪ್ಯಾಕ್ಟ್ ಪ್ಲೇಯರ್’  ಆಗಿ ಸಾಯಿ ಸುದರ್ಶನ್ ಅವರನ್ನು ಸೇರಿಸಿಕೊಂಡಿತ್ತು.

ಇಂಪ್ಯಾಕ್ಟ್ ಆಗದ ಪ್ಲೇಯರ್ಸ್!​

ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಇಂಪ್ಯಾಕ್ಟ್‌ ಪ್ಲೇಯರ್‌ ಆಯ್ಕೆ ಶುಕ್ರವಾರ ಉಭಯ ತಂಡಗಳಿಗೂ ಪ್ರಯೋಜನವಾಗಲಿಲ್ಲ. ಚೆನ್ನೈ ಪರ 3.2 ಓವರ್ ಬೌಲಿಂಗ್​ ಮಾಡಿದ ದೇಶಪಾಂಡೆ, 51 ರನ್​ ನೀಡಿ ದುಬಾರಿಯಾದರು‌ ಕೇವಲ 1 ವಿಕೆಟ್‌ ಪಡೆಯಲಷ್ಟೇ ಶಕ್ತರಾದರು.

ಜಿಟಿ ತಂಡದಲ್ಲಿ ಸಾಯಿ ಸುದರ್ಶನ್​ ಸಹ ತಮಗೆ ಸಿಕ್ಕಿದ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲರಾದರು. 17 ಎಸೆತಗಳನ್ನು ಎದುರಿಸಿದ ಸುದರ್ಶನ್ 3 ಬೌಂಡರಿಗನ್ನೊಳಗೊಂಡ 22 ರನ್​ ಗಳಿಸಿದರು.‌

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಆರ್‌ಸಿಬಿ ಪಂದ್ಯದ ಟಿಕೆಟ್‌ಗಳಿಗೆ ತಡರಾತ್ರಿಯಿಂದಲೇ ಕಾದು ಕುಳಿತ ಅಭಿಮಾನಿಗಳು

ಚೆನ್ನೈ ತಂಡದ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿದ್ದವರು; ತುಷಾರ್​ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ ಹಾಗೂ ನಿಶಾಂತ್ ಸಿಂಧು.

ಗುಜರಾತ್ ತಂಡದ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿದ್ದವರು;‌ ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆ ಎಸ್ ಭಾರತ್ ಜೊತೆಗೆ ಬಿ ಸಾಯಿ ಸುದರ್ಶನ್

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್...