ಐಪಿಎಲ್ ಉದ್ಘಾಟನಾ ಪಂದ್ಯ | ಕೆಕೆಆರ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೈದ ಆರ್‌ಸಿಬಿ

Date:

Advertisements

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಶುಭಾರಂಭಗೈದಿದೆ‌.

ಗೆಲ್ಲಲು 175 ರನ್‌ಗಳ ಗುರಿಯನ್ನು ಪಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಫಿಲ್ ಸಾಲ್ಟ್ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಭರ್ಜರಿ ಅರ್ಧಶತಕದ ನೆರವಿನಿಂದ 16.2 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಗುರಿಯನ್ನು ಸಾಧಿಸಿ, ಗೆಲುವು ಸಾಧಿಸಿತು.

ಆರ್‌ಸಿಬಿ ಪರವಾಗಿ ಆರಂಭಿಕ ಆಟಗಾರನಾಗಿ ಬ್ಯಾಟಿಂಗ್ ಇಳಿದಿದ್ದ ವಿರಾಟ್ ಕೊಹ್ಲಿ, 36 ಎಸೆತಗಳಲ್ಲಿ 59 ರನ್ ಸಿಡಿಸಿ, ಔಟಾಗದೆ ಉಳಿದರು. ಇನ್ನೋರ್ವ ಆರಂಭಿಕ ಆಟಗಾರ ಫಿಲ್ ಸಾಲ್ಟ್ 31 ಎಸೆತಗಳಲ್ಲಿ 56 ರನ್ ಗಳಿಸಿ, ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.

Advertisements

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಅಜಿಂಕ್ಯಾ ರಹಾನೆ ನೇತೃತ್ವದ ಕೆಕೆಆರ್ ಒಂದು ಹಂತದಲ್ಲಿ 107 ರನ್ ಗಳಿಸಿ, ಕೇವಲ ಒಂದು ವಿಕೆಟ್ ಕಳೆದುಕೊಂಡು, ಭರ್ಜರಿ ಮೊತ್ತವನ್ನು ಕಲೆ ಹಾಕುವ ಸೂಚನೆ ನೀಡಿತ್ತು. ಆದರೆ, ಕೊನೆಯ ಓವರ್‌ಗಳಲ್ಲಿ ಉತ್ತಮ ಬೌಲಿಂಗ್ ನಡೆಸಿದ ಆರ್‌ಸಿಬಿಯ ಬೌಲರ್‌ಗಳು 174 ರನ್‌ ಗಳಿಸುವಷ್ಟರಲ್ಲಿ 8 ವಿಕೆಟ್‌ಗಳನ್ನು ಪಡೆಯುವ ಮೂಲಕ ನಿಯಂತ್ರಿಸುವಲ್ಲಿ ಸಫಲರಾಗಿದ್ದರು.

ಕೆಕೆಆರ್ ಪರ ನಾಯಕನ ಆಟವಾಡಿದ ಅಜಿಂಕ್ಯಾ ರಹಾನೆ, 31 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 56 ರನ್ ಗಳಿಸಿ, ಅರ್ಧಶತಕದ ಆಟವಾಡಿದರು. ‌ಇವರಿಗೆ ಸುನಿಲ್ ನರೇನ್ 44 ರನ್ (5 ಬೌಂಡರಿ, 3 ಸಿಕ್ಸ್) ಸಾಥ್ ನೀಡಿದರು.

ಆರ್‌ಸಿಬಿ ತಂಡದ ಪರ ಉತ್ತಮ ಬೌಲಿಂಗ್ ನಡೆಸಿದ ಕೃನಾಲ್ ಪಾಂಡ್ಯ, ನಿಗದಿತ 4 ಓವರ್‌ಗಳಲ್ಲಿ ಕೇವಲ 29 ರನ್ ನೀಡಿ, ಮೂರು ಪ್ರಮುಖ ವಿಕೆಟ್ ಕೀಳುವಲ್ಲಿ ಯಶಸ್ವಿಯಾದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X