IPL 2025 | ಕೆ.ಎಲ್‌. ರಾಹುಲ್‌ರನ್ನು ಆರ್‌ಸಿಬಿ ಕೈಬಿಟ್ಟಿದ್ದೇಕೆ? ಸತ್ಯ ಬಹಿರಂಗ!

Date:

Advertisements

2025ರಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್‌) ಎಲ್ಲ ಪ್ರಾಂಚೈಸಿಗಳು ತಮ್ಮ ತಂಡಗಳಿಗೆ ಆಟಗಾರರನ್ನು ಖರೀದಿಸಿದ್ದು, ತಂಡ ರಚಿಸಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಕೂಡ 22 ಆಟಗಾರರ ತಂಡವನ್ನು ಕಟ್ಟಿದೆ. ಈ ಬೆನ್ನಲ್ಲೇ, ಕನ್ನಡಿಗನೇ ಆದ ಕೆ.ಎಲ್‌ ರಾಹುಲ್‌ ಅವರನ್ನು ಆರ್‌ಸಿಬಿ ಕೈಬಿಟ್ಟಿದ್ದೇಕೆ ಎಂಬುದರ ಹಿಂದಿನ ಸತ್ಯವೂ ಬಹಿರಂಗವಾಗಿದೆ.

ನವೆಂಬರ್‌ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯ ವೇಳೆ ಕೆ.ಎಲ್‌ ರಾಹುಲ್‌ರನ್ನು ತಂಡಕ್ಕೆ ತೆಗೆದುಕೊಳ್ಳಲು ಆರ್‌ಸಿಬಿ ಪ್ರಾಂಚೈಸಿ ಹೆಚ್ಚಿನ ಒಲವು ತೋರಿರಲಿಲ್ಲ. ಹೀಗಾಗಿ, ಆರ್‌ಸಿಬಿ ವಿರುದ್ಧ ಭಾರೀ ಆಕ್ರೋಶ, ಟೀಕೆ, ಟ್ರೋಲ್‌ಗಳು ವ್ಯಕ್ತವಾಗಿದ್ದವು. ಇದೀಗ, ಆರ್‌ಸಿಬಿಯ ಆದ್ಯತೆ ಪಟ್ಟಿ (ಪ್ರಯಾರಿಟಿ ಲಿಸ್ಟ್‌) ಬಹಿರಂಗವಾಗಿದೆ. ರಾಹುಲ್‌ರನ್ನು ಆರ್‌ಸಿಬಿ ಆದ್ಯತೆಯಾಗಿ ಇಟ್ಟುಕೊಂಡಿರಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಹರಾಜು ಪ್ರಕ್ರಿಯೆಯನ್ನು ಆಟಗಾರರನ್ನು ಖರೀದಿಸಲು, ಮೂರು ಪಟ್ಟಿಯನ್ನು ಮಾಡಿಕೊಂಡಿತ್ತು. ಅದರಲ್ಲಿ, ರಾಹುಲ್‌ ‘ಎ’ ಪಟ್ಟಿಯಲ್ಲಿ ಇರಲಿಲ್ಲ. ಅವರನ್ನು ಆರ್‌ಸಿಬಿ ‘ಸಿ’ ಪಟ್ಟಿಯಲ್ಲಿ ಇಟ್ಟುಕೊಂಡಿತ್ತು. ಹೀಗಾಗಿಯೇ, ಕೆ ಎಲ್ ರಾಹುಲ್‌ ಅವರನ್ನು 7 ಕೋಟಿ ರೂ.ಗಿಂತ ಹೆಚ್ಚು ಹಣ ಕೊಟ್ಟು ಖರೀದಿಸಲು ಆರ್‌ಸಿಬಿಗೆ ಆಸಕ್ತಿ ತೋರಿಲ್ಲ ಎಂದು ಹೇಳಲಾಗಿದೆ.

Advertisements

ಹರಾಜಿನಲ್ಲಿ ಕೆ.ಎಲ್‌ ರಾಹುಲ್‌ ಮೇಲೆ 7 ಕೋಟಿ ರೂ.ವರೆಗೆ ಬಿಡ್‌ ಮಾಡಿದ ಆರ್‌ಬಿಸಿ, ಆ ನಂತರ ಹಿಂದೆ ಸರಿದಿತ್ತು. ಅದಕ್ಕೆ, ರಾಹುಲ್‌ ಅವರು ಆರ್‌ಸಿಬಿ ಫ್ರಾಂಚೈಸಿಯ ಆದ್ಯತೆಯಾಗಿರಲಿಲ್ಲ ಎಂಬುದೇ ಕಾರಣವೆಂದು ಸ್ಪಷ್ಟವಾಗಿದೆ. ಹೀಗಾಗಿ, ತವರ ತಂಡದಲ್ಲಿ ಆಡಬೇಕು ಎಂಬ ರಾಹುಲ್‌ ಅವರ ಬಹುಕಾಲದ ಕನಸು, ಕನಸಾಗಿಯೇ ಉಳಿದಿದೆ. ರಾಹುಲ್‌ ಅವರ ಅಭಿಮಾನಿಗಳು, ಕೈಬಿಟ್ಟಿರುವುದಕ್ಕೆ ಆರ್‌ಸಿಬಿ ಫ್ರಾಂಚೈಸಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಆರ್‌ಸಿಬಿ ಕೈಬಿಟ್ಟಿರುವುದರಿಂದ ಕೆ ಎಲ್ ರಾಹುಲ್ ಅವರನ್ನು ದಿಲ್ಲಿ ಕ್ಯಾಪಿಟಲ್ಸ್ ತಂಡವು 14 ಕೋಟಿ ನೀಡಿ, ಖರೀದಿಸಿದೆ. ಕನ್ನಡಿಗ ರಾಹುಲ್, ಕಳೆದ ಸಾಲಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ನಾಯಕರಾಗಿದ್ದರು.

ಇದನ್ನು ಓದಿದ್ದೀರಾ? ಮೊಬೈಲ್ ಲೋನ್ ‘ಆ್ಯಪ್’ ಸಾಲದ ಸುಳಿ: ಪತ್ನಿಯ ‘ಅಶ್ಲೀಲ’ ಫೋಟೋ ವೈರಲ್; ಪತಿ ಆತ್ಮಹತ್ಯೆ

ಸದ್ಯ, ಆರ್‌ಸಿಬಿ ಕಟ್ಟಿರುವ 22 ಆಟಗಾರರ ತಂಡದಲ್ಲಿ ಮೂವರು ರಿಟೈನ್ ಆಗಿದ್ದರೆ, 19 ಆಟಗಾರರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಾಗಿದೆ. ಅವರಲ್ಲಿ, ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಆರ್‌ಸಿಬಿ ಖರೀದಿಸಿದೆ. ಶರ್ಮಾ ಅವರು ಆರ್​ಸಿಬಿಯ ಮೊದಲ ಟಾರ್ಗೆಟ್‌ ಪಟ್ಟಿಯಲ್ಲಿದ್ದರು ಎಂಬುದು ಗೊತ್ತಾಗಿದೆ.

ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ ಇದ್ದಾರೆ. ವಿರಾಟ್‌ ಕೊಹ್ಲಿ ಮತ್ತೆ ಟೀಮ್‌ ಕ್ಯಾಪ್ಟನ್‌ ಆಗಲಿದ್ದಾರೆ ಎಂಬ ಮಾತುಗಳೂ ಇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X