ಐಪಿಎಲ್ | ರವೀಂದ್ರ ಜಡೇಜಾ ಆಲ್‌ರೌಂಡ್ ಪ್ರದರ್ಶನಕ್ಕೆ ತಲೆಬಾಗಿದ ಪಂಜಾಬ್: ಚೆನ್ನೈಗೆ 28 ರನ್‌ಗಳ ಜಯ

Date:

Advertisements

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್​​ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು, ಚೆನ್ನೈ ಸೂಪರ್ ಕಿಂಗ್ಸ್ ತಂಡ 28 ರನ್‌ಗಳಿಂದ ಭರ್ಜರಿ ಜಯ ಕಂಡಿದೆ.

ಟಾಸ್ ಗೆದ್ದುಕೊಂಡಿದ್ದ ಪಂಜಾಬ್ ಮೊದಲು ಫೀಲ್ಡಿಂಗ್ ಆಯ್ದುಕೊಂಡು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತ್ತು. ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಮಾಡಿ 43 ರನ್ ಗಳಿಸಿ ತಂಡಕ್ಕೆ ಆಸರೆ ಆಗಿದ್ದರಿಂದ ನಿಗದಿರ 20 ಓವರ್​ಗಳಲ್ಲಿ ಪಂಜಾಬ್​ಗೆ 167 ರನ್​​ಗಳ ಗುರಿ ನೀಡಿತ್ತು.

ಆದರೆ ಈ ಸಾಧಾರಣ ಗುರಿಯನ್ನು ಬೆನ್ನಟ್ಟಲು ಪರದಾಡಿದ ಪಂಜಾಬ್, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಪರ ಉತ್ತಮ ಸ್ಪಿನ್ ದಾಳಿ ಮಾಡಿದ ರವೀಂದ್ರ ಜಡೇಜಾ ಪಂಜಾಬ್‌ ಗೆಲುವಿಗೆ ತಣ್ಣೀರು ಎರಚಿದರು. ಈ ಮೂಲಕ ಚೆನ್ನೈ 28 ರನ್‌ಗಳಿಂದ ಗೆಲುವು ಸಾಧಿಸಿತು.

Advertisements

ಚೆನ್ನೈ ನೀಡಿ 168 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್‌ ಆರಂಭಿದಲ್ಲೇ ಜಾನಿ ಬೈರ್‌ಸ್ಟೋವ್ (7) ಮತ್ತು ರಿಲೀ ರೊಸೊವ್ (೦) ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಈ ವೇಳೆ ಆರಂಭಿಕ ಪ್ರಭಾಸಿಮ್ರಾನ್ ಸಿಂಗ್ ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಬಂದ ಶಶಾಂಕ್ ಸಿಂಗ್ ನಿಧಾನವಾಗಿ ರನ್‌ ಕಲೆ ಹಾಕಿದರು. ಉತ್ತಮವಾಗಿ ಆಡುತ್ತಿದ್ದ ಶಶಾಂಕ್‌ ಸಿಂಗ್‌ 27 ರನ್‌ಗಳಿಗೆ ಔಟ್‌ ಆದರು.

ಬಳಿಕ ಪ್ರಭಾಸಿಮ್ರಾನ್ ಸಿಂಗ್ ಕೂಡ ವಿಕೆಟ್‌ ಕಳೆದುಕೊಂಡರು. ನಂತರ ಕ್ರೀಸ್‌ಗೆ ಬಂದ ಯಾವುದೇ ಪಂಜಾಬ್‌ ಆಟಗಾರರು ತಂಡಕ್ಕೆ ಆಸರೆಯಾಗಲಿಲ್ಲ. ಸ್ಯಾಮ್ ಕರ್ರಾನ್(7), ಜಿತೇಶ್ ಶರ್ಮಾ(0), ಅಶುತೋಷ್ ಶರ್ಮಾ (3) ಹರ್ಷಲ್ ಪಟೇಲ್ (12) ರಾಹುಲ್ ಚಾಹರ್ (16) ಔಟ್‌ ಆಗುವ ಮೂಲಕ ಪೆವಿಲಿಯನ್‌ ಪರೇಡ್‌‌ ನಡೆಸಿದರು.

ಕೊನೆಯಲ್ಲಿ ಪಂಜಾಬ್‌ ಗೆಲುವಿಗೆ ಹೋರಾಟ ನಡೆಸಿದ ಹರ್‌ಪ್ರೀತ್ ಬ್ರಾರ್ ಅಜೇಯ 16 ರನ್‌ ಗಳಿಸದರೆ, ಕಗಿಸೊ ರಬಾಡ 11 ರನ್‌ ಬಾರಿಸಿದರು. ಈ ಮೂಲಕ ಗುರಿ ತಲುವಲ್ಲಿ ಪಂಜಾಬ್‌ ವಿಫಲವಾಗಿ 28 ರನ್‌ಗಳಿಂದ ಸೋಲಿಗೆ ಶರಣಾಯಿತು.

ಚೆನ್ನೈ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್‌ಗಳು, ಸಾಧಾರಣ ಮೊತ್ತದ ಗುರಿ ನೀಡಿದ್ದರೂ ಕೂಡ ತಂಡಕ್ಕೆ ಜಯ ತಂದುಕೊಡುವಲ್ಲಿ ಸಫಲರಾದರು.

ಇದನ್ನು ಓದಿದ್ದೀರಾ? ಇಸ್ರೇಲ್‌ನಲ್ಲಿ ಅಲ್-ಜಝೀರಾ ಚಾನೆಲ್‌ನ ಪ್ರಸಾರಕ್ಕೆ ನಿ‍ಷೇಧ ಹೇರಿದ ನೆತನ್ಯಾಹು ಸರ್ಕಾರ

ರವೀಂದ್ರ ಜಡೇಜಾ 3 ವಿಕೆಟ್‌ ಕಬಳಿಸಿದರೆ, ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ 2 ವಿಕೆಟ್‌ ಪಡೆದುಕೊಂಡರು. ಮಿಚೆಲ್ ಸ್ಯಾಂಟ್ನರ್ ಹಾಗೂ ಶಾರ್ದೂಲ್ ಠಾಕೂರ್ 1 ವಿಕೆಟ್‌ ಪಡೆಯುವ ಮೂಲಕ ತಂಡದ ಗೆಲುವಿಗೆ ತಮ್ಮದೇ ಆದ ಕೊಡುಗೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X