ಐಪಿಎಲ್ | ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕೆಕೆಆರ್‌: ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ ಮೊತ್ತ ದಾಖಲು

Date:

Advertisements

ಮುಂಬೈ ವಿರುದ್ಧ ಕಳೆದ ಮಾರ್ಚ್ 27ರಂದು ನಡೆದಿದ್ದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 277 ರನ್‌ಗಳನ್ನು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಕೀರ್ತಿ ಹೈದರಾಬಾದ್ ತಂಡದ ಹೆಸರಲ್ಲಿತ್ತು. ಈ ದಾಖಲೆಯನ್ನು ಕೇವಲ ಎಂಟೇ ದಿನಗಳೊಳಗೆ ಮುರಿಯಲು ಯತ್ನಿಸಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ, ಕೇವಲ ಐದು ರನ್‌ಗಳಿಂದ ದಾಖಲೆ ಸರಿಗಟ್ಟುವುದರಿಂದ ತಪ್ಪಿತು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ. ಇದು ಐಪಿಎಲ್‌ನ ಇತಿಹಾಸದಲ್ಲೇ ಎರಡನೇ ಗರಿಷ್ಠ ಮೊತ್ತವಾಗಿದೆ.

ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ತಂಡಕ್ಕೆ ಸುನಿಲ್ ನರೇನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಬಲಿಷ್ಠ ಆರಂಭ ನೀಡಿದರು. ಐದನೇ ಓವರ್‌ನಲ್ಲಿ ಕೆಕೆಆರ್ ಮೊದಲ ವಿಕೆಟ್ ಕಳೆದುಕೊಂಡಿತಾದರೂ, ಆ ವೇಳೆಗಾಗಲೇ 70 ರನ್ ಪೇರಿಸಿತ್ತು. ಸುನಿಲ್ ನರೇನ್ 39 ಎಸೆತಗಳಲ್ಲಿ 85 ರನ್(7 ಸಿಕ್ಸ್, 7 ಬೌಂಡರಿ), ಯುವ ಬ್ಯಾಟರ್ ರಘುವಂಶಿ 27 ಎಸೆತಗಳಲ್ಲಿ 54 ರನ್ ಗಳಿಸಿ ಮಿಂಚಿದರು.

Advertisements

ಉಳಿದಂತೆ ಆಂಡ್ರೆ ರಸ್ಸೆಲ್ 19 ಎಸೆತಗಳಲ್ಲಿ 41, ರಿಂಕು ಸಿಂಗ್ 8 ಎಸೆತಗಳಲ್ಲಿ 26 ಹಾಗೂ ನಾಯಕ ಶ್ರೇಯಸ್ ಅಯ್ಯರ್ 18 ರನ್ ಗಳಿಸಿದರು. ಕೊನೆಯಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್ ದಾಖಲಿಸುವ ಮೂಲಕ, ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ಗೆ 273 ರನ್‌ಗಳ ಬೃಹತ್ ಗುರಿ ನೀಡಿದೆ.

ಡೆಲ್ಲಿ ಪರ ಬೌಲಿಂಗ್‌ನಲ್ಲಿ ನೋರ್‌ಜೆ 3, ಇಶಾಂತ್ ಶರ್ಮಾ 2 ವಿಕೆಟ್ ಪಡೆದರೆ, ಖಲೀಲ್ ಹಾಗೂ ಮಾರ್ಷ್‌ ತಲಾ ಒಂದೊಂದು ವಿಕೆಟ್ ಪಡೆದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X