ಐಪಿಎಲ್ | ರಸ್ಸೆಲ್ ಸ್ಫೋಟಕ ಬ್ಯಾಟಿಂಗ್: ಹೈದರಾಬಾದ್‌ಗೆ ಗೆಲ್ಲಲು 209 ರನ್‌ಗಳ ಗುರಿ ನೀಡಿದ ಕೆಕೆಆರ್

Date:

Advertisements

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ಸನ್‌ರೈಸರ್ಸ್‌ ಹೈದರಾಬಾದ್ ತಂಡದ ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಸ್ಫೋಟಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಭರ್ಜರಿ ಆಟದ ನೆರವಿನಿಂದ 208 ರನ್‌ಗಳ ಬೃಹತ್ ರನ್ ದಾಖಲಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್, ಆರಂಭಿಕ ಆಘಾತಕ್ಕೊಳಗಾಯಿತಾದರೂ, ಫಿಲ್ ಸಾಲ್ಟ್ ಅವರ ಅರ್ಧಶತಕ(54 ರನ್, 40 ಎಸೆತ, 3 ಬೌಂಡರಿ ಹಾಗೂ 3 ಸಿಕ್ಸರ್) ಹಾಗೂ ಮಧ್ಯಮ ಕ್ರಮಾಂಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಸ್ಫೋಟಕ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ದಾಖಲಿಸಿತು.

ಕೇವಲ 25 ಎಸೆತಗಳನ್ನು ಎದುರಿಸಿದ ವೆಸ್ಟ್‌ಇಂಡೀಸ್‌ನ ದೈತ್ಯ ಬ್ಯಾಟರ್ ರಸ್ಸೆಲ್, ಭರ್ಜರಿ 7 ಸಿಕ್ಸರ್ ಹಾಗೂ ಮೂರು ಬೌಂಡರಿಯ ನೆರವಿನಿಂದ 64 ರನ್‌ಗಳನ್ನು ಬಾರಿಸಿದರು.

Advertisements

ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ ಕೇವಲ 51 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆ ಬಳಿಕ ಸಾವಧಾನ ಆಟವಾಡಿದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು, ಬೃಹತ್ ಗುರಿಯನ್ನು ನೀಡುವಲ್ಲಿ ಸಫಲರಾದರು.

ಕೆಕೆಆರ್ ಪರ ನಾಯಕ ಶ್ರೇಯಸ್ ಅಯ್ಯರ್ ಶೂನ್ಯ ಸುತ್ತುವ ಮೂಲಕ ಮೊದಲ ಪಂದ್ಯದಲ್ಲೇ ರನ್ ಗಳಿಸಲು ವಿಫಲರಾದರು. ಉಳಿದಂತೆ ಸುನಿಲ್ ನರೇನ್ 2 ರನ್, ವೆಂಕಟೇಶ್ ಅಯ್ಯರ್ 7, ನಿತೀಶ್ ರಾಣಾ 9 ರನ್ ಗಳಿಸಿ, ವಿಕೆಟ್ ಒಪ್ಪಿಸುವ ಮೂಲಕ ಎರಡಂಕೆ ದಾಟಲು ವಿಫಲವಾದರು.

ರಮಣ್‌ದೀಪ್ ಸಿಂಗ್ 35 ರನ್ ಹಾಗೂ ರಿಂಕು ಸಿಂಗ್ 23 ರನ್ ಗಳಿಸುವ ಮೂಲಕ ಸ್ಕೋರ್‌ ಬೋರ್ಡ್‌ಗೆ ತಮ್ಮದೇ ಆದ ಕೊಡುಗೆ ನೀಡಿದರು.

ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಪರ ಬೌಲಿಂಗ್‌ನಲ್ಲಿ ನಟರಾಜನ್ 3 ವಿಕೆಟ್ ಪಡೆಯುವಲ್ಲಿ ಸಫಲರಾದರೆ, ಮಯಾಂಕ್ ಮಾರ್ಕಂಡೆ 2 ವಿಕೆಟ್ ಗಳಿಸಿದರು. ನಾಯಕ ಪ್ಯಾಟ್ ಕಮ್ಮಿನ್ಸ್ 1 ವಿಕೆಟ್ ಗಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X