ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

Date:

Advertisements

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಹೈದರಾಬಾದ್​​ ನೀಡಿದ್ದ ಬೃಹತ್​​ ಟಾರ್ಗೆಟ್​​​ ಮುಟ್ಟಲಾಗದೆ ಸೋಲೊಪ್ಪಿಕೊಂಡಿದೆ.

ಹೈದರಾಬಾದ್​ ನೀಡಿದ್ದ 267 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್​, 19.1 ಓವರ್‌ಗಳಲ್ಲಿ 199 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ 67 ರನ್‌ಗಳಿಂದ ಸೋತಿತು.

ಡೆಲ್ಲಿ ಪರ ಅಬ್ಬರದ ಬ್ಯಾಟಿಂಗ್​ ಮಾಡಿದ ಜೇಕ್ ಫ್ರೇಸರ್-ಮೆಗರ್ಕ್ ಕೇವಲ 18 ಬಾಲ್​ನಲ್ಲಿ 65 ರನ್​ ಸಿಡಿಸಿ, ಮಿಂಚಿದರು. ಅದರಲ್ಲೂ ವಾಷಿಂಗ್ಟನ್ ಸುಂದರ್ ಎಸೆದ ಒಂದೇ ಓವರ್​ನಲ್ಲಿ 3 ಸಿಕ್ಸರ್​​, ಮೂರು ಬೌಂಡರಿ ಸಿಡಿಸಿ 30 ರನ್​ ಚಚ್ಚಿದರು.

Advertisements

ಹೈದರಾಬಾದ್​ ಬೌಲರ್​ಗಳ ಬೆಂಡೆತ್ತಿದ ಜೇಕ್ ಫ್ರೇಸರ್-ಮೆಗರ್ಕ್ ಬರೋಬ್ಬರಿ 7 ಸಿಕ್ಸರ್​​, 5 ಬೌಂಡರಿ ಸಿಡಿಸಿ ಸಿಡಿಸಿ, ಮಾರ್ಕಾಂಡೆಗೆ ವಿಕೆಟ್ ಒಪ್ಪಿಸಿದರು.

ಆ ಬಳಿಕ ಅಭಿಷೇಕ್​ ಕೇವಲ 22 ಬಾಲ್​ನಲ್ಲಿ 44 ರನ್​ ಸಿಡಿಸಿ, ಸ್ಟಂಪ್ ಔಟ್ ಆದರು.

 

ಪಂತ್​​ ಏಕಾಂಗಿ ಹೋರಾಟ ಮಾಡಲು ಯತ್ನಿಸಿದರು. ಆದರೆ, ಸ್ಫೋಟಕ ಬ್ಯಾಟಿಂಗ್​ ಮಾಡಲು ಅವರಿಂದ ಆಗಲಿಲ್ಲ. 35 ಎಸೆತಗಳಲ್ಲಿ ಕೇವಲ 44 ರನ್​ ಸಿಡಿಸಿದರಾದರೂ, ಸೋಲಬೇಕಾಯಿತು.‌ ಡೆಲ್ಲಿ ಕ್ಯಾಪಿಟಲ್ಸ್ 19.1 ಓವರ್​ಗಳಲ್ಲಿ 199 ರನ್​ಗಳಿಗೆ ಆಲೌಟ್​ ಆಯಿತು.

ಹೈದರಾಬಾದ್ ಪರ ಬೌಲಿಂಗ್‌ನಲ್ಲಿ ನಟರಾಜನ್ 4, ಮಾರ್ಕಂಡೆ, ನಿತೀಶ್ ರೆಡ್ಡಿ ತಲಾ 2 ವಿಕೆಟ್ ಹಾಗೂ ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಮೊದಲು ಟಾಸ್​ ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಕ್ಯಾಪ್ಟನ್​​ ರಿಷಬ್​ ಪಂತ್​​​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದರು. ಹಾಗಾಗಿ ಸನ್​ರೈಸರ್ಸ್​ ಹೈದರಾಬಾದ್​ ಟೀಮ್​ ಮೊದಲು ಬ್ಯಾಟಿಂಗ್​ ಮಾಡಿತ್ತು.

ಹೈದರಾಬಾದ್​ ಪರ ಓಪನರ್​ ಆಗಿ ಬಂದ ಅಭಿಷೇಕ್​ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಭರ್ಜರಿ ಬ್ಯಾಟಿಂಗ್​ ಮಾಡಿದ್ದರು. ಹೆಡ್ 89, ಅಭಿಷೇಕ್ 49 ಹಾಗೂ ಆ ಬಳಿಕ ಶಾಬಾಝ್ ಅವರ 59 ರನ್‌ಗಳ ನೆರವಿನಿಂದ ಹೈದರಾಬಾದ್​ 20 ಓವರ್​ನಲ್ಲಿ 266 ರನ್​ ಪೇರಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X