ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

Date:

Advertisements

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್ ಪ್ರವೇಶಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ತಲುಪುವ ಭರವಸೆ ಮೂಡಿಸಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ್ದು, ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ.

ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಆರ್‌ಸಿಬಿಯನ್ನು 4 ವಿಕೆಟ್‌ಗಳಿಂದ ಸೋಲಿಸಿದೆ.

ರಾಜಸ್ಥಾನ ತಂಡದ ಸಂಘಟಿತ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ್ದ ಆರ್‌ಸಿಬಿಯ ಬ್ಯಾಟರ್‌ಗಳು, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ದಾಖಲಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡವು 19 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 174 ರನ್ ದಾಖಲಿಸುವ ಮೂಲಕ ಗೆಲುವು ದಾಖಲಿಸಿತು.

Advertisements

ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ ಮತ್ತು ಟಾಮ್ ಕ್ಯಾಡ್ಮೋರ್ 33 ಎಸೆತಗಳಲ್ಲಿ 46 ರನ್‌ ಹೊಡೆದರು. ಟಾಮ್ ಕ್ಯಾಡ್ಮೋರ್ 20 ರನ್‌ ಗಳಿಸಿ ಔಟಾದರೆ, ಯಶಸ್ವಿ ಜೈಸ್ವಾಲ್‌ 45 ರನ್‌(30 ಎಸೆತ, 8 ಬೌಂಡರಿ) ಹೊಡೆದು ವಿಕೆಟ್‌ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್‌ 17 ರನ್‌ ಸಿಡಿಸಿ, ಸ್ಟಂಪ್ ಔಟಾದರು.

112 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ರಾಜಸ್ಥಾನ ವಿರಾಟ್‌ ಕೊಹ್ಲಿ ಅವರ ಅತ್ಯುತ್ತಮ ಥ್ರೋನಿಂದಾಗಿ 4ನೇ ವಿಕೆಟ್‌ ಕಳೆದುಕೊಂಡಿತು. 8 ರನ್‌ ಗಳಿಸಿದ್ದ ಧ್ರುವ್ ಜುರೆಲ್ ಎರಡನೇ ರನ್‌ ಓಡುವಾಗ ರನೌಟ್‌ಗೆ ಬಲಿಯಾದರು.

ಕೊನೆಯಲ್ಲಿ ರಿಯಾನ್ ಪರಾಗ್ 26 ಎಸೆತಗಳಲ್ಲಿ 36 ರನ್(2 ಬೌಂಡರಿ, 2 ಸಿಕ್ಸರ್‌) ಹಾಗೂ ಹೆಟ್ಮೇಯರ್‌ 26 ರನ್‌(14 ಎಸೆತ, 3 ಬೌಂಡರಿ, 1 ಸಿಕ್ಸರ್‌) ಗಳಿಸಿ, ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಪೊವೆಲ್‌ ಔಟಾಗದೇ 16 ರನ್‌ ಹೊಡೆದ ಪರಿಣಾಮ ರಾಜಸ್ಥಾನ ಪಂದ್ಯವನ್ನು 19 ಓವರ್‌ನಲ್ಲೇ ಗೆದ್ದುಕೊಂಡಿತು.

 

ಇಂದು ಗೆದ್ದಿರುವ ರಾಜಸ್ಥಾನ ತಂಡವು ಎರಡನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಆರ್‌ಸಿಬಿ ಸೋಲುವ ಮೂಲಕ ಟೂರ್ನಿಯಿಂದಲೇ ಹೊರಬಿದ್ದಿದೆ. ಎರಡನೇ ಕ್ವಾಲಿಫೈಯರ್‌ ಪಂದ್ಯವು ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ. ಈ ಪಂದ್ಯವನ್ನು ಗೆದ್ದವರು ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಎದುರಿಸಲಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X