ಮೊದಲ ಟೆಸ್ಟ್ ಕ್ರಿಕೆಟ್ | ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್: ಭಾರತ ಉತ್ತಮ ಶುಭಾರಂಭ

Date:

Advertisements

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದೆ.

ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಉತ್ತರವಾಗಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ದಿನಾದಾಂತ್ಯಕ್ಕೆ 23 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅಜೇಯ 76 ರನ್ ಹಾಗೂ ಶುಭಮನ್ ಗಿಲ್ ಅಜೇಯ 14 ರನ್ ಗಳಿಸಿದ್ದರು. ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆಯಲು 127 ರನ್ ಗಳಿಸಬೇಕಿದೆ.

ನಾಯಕ ರೋಹಿತ್ ಶರ್ಮಾರೊಂದಿಗೆ ಇನಿಂಗ್ಸ್ ಆರಂಭಿಸಿದ ಜೈಸ್ವಾಲ್ ಮೊದಲ ವಿಕೆಟ್ ನಷ್ಟಕ್ಕೆ 80 ರನ್ ಕಲೆ ಹಾಕಿದರು. ರೋಹಿತ್ 13ನೇ ಓವರ್‌ನಲ್ಲಿ 24 ರನ್ ಗಳಿಸಿ ಲೀಚ್ ಬೌಲಿಂಗ್ ನಲ್ಲಿ ಔಟಾದರು. 70 ಚೆಂಡುಗಳಲ್ಲಿ ರನ್ ಗಳಿಸಿದ ಜೈಸ್ವಾಲ್ ಅವರ ಆಟದಲ್ಲಿ 9 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳಿದ್ದವು.

Advertisements

ಸ್ಪಿನ್ನರ್‌ಗಳ ದಾಳಿಗೆ ಇಂಗ್ಲೆಂಡ್ ತತ್ತರ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಗಳ ದಾಳಿಗೆ ಸಿಲುಕಿದ ಆಂಗ್ಲರ ಪಡೆ ಮೊದಲ ಇನಿಂಗ್ಸ್ ನಲ್ಲಿ 64.3 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್ ಆಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಇಂಗ್ಲೆಂಡ್ ಪರ ನಾಯಕ ಅರ್ಧ ಶತಕ (70) ಬಾರಿಸಿದ್ದನ್ನು ಬಿಟ್ಟರೆ ಉಳಿದ ಆಟಗಾರರು 40ರ ಗಡಿ ದಾಟಲಿಲ್ಲ. ಝಾಕ್ ಕ್ರಾಲಿ(20), ಬೆನ್ ಡಕೆಟ್(35), ಜಾನಿ ಬೈರ್ಸ್ಟೋ(37), ಜೋ ರೂಟ್ (29), ಟಾಮ್ ಹಾರ್ಟ್ಲಿ(23) ರನ್ ಗಳಿಸಿ ತಂಡದ ಮೊತ್ತ 240 ದಾಟಲು ಕಾರಣರಾದರು.

ಭಾರತದ ಪರ ಅಶ್ವಿನ್ 68/3, ಅಕ್ಸರ್ ಪಟೇಲ್ 33/2, ರವೀಂದ್ರ ಜಡೇಜಾ 88/3 ಹಾಗೂ ಬುಮ್ರಾ 28/2 ವಿಕೆಟ್ ಕಬಳಿಸಿ ಇಂಗ್ಲೆಂಡ್ ತಂಡವನ್ನು ಕಟ್ಟಿ ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X