ಮೂರನೇ ಟೆಸ್ಟ್ : ಜಡೇಜಾ ಸ್ಪಿನ್ ದಾಳಿಗೆ ನಲುಗಿದ ಇಂಗ್ಲೆಂಡ್ ;ಭಾರತಕ್ಕೆ 434 ರನ್‍ ಅಂತರದ ಭರ್ಜರಿ ಜಯ

Date:

Advertisements

ರಾಜ್‍ಕೋಟ್‍ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ  ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 434 ರನ್‍ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ನೀಡಿದ 557 ರನ್‍ ಗುರಿಯನ್ನು  ಬೆನ್ನಟ್ಟಿದ ಆಂಗ್ಲರು ರವೀಂದ್ರ ಜಡೇಜಾ ಅವರ ಸ್ಪಿನ್‍ ದಾಳಿಗೆ ಎರಡನೇ ಇನಿಂಗ್ಸ್‍ನಲ್ಲಿ39.4 ಓವರ್‍ನಲ್ಲಿ  122 ರನ್‍ಗಳಿಗೆ ಆಲೌಟ್‍ ಆದರು.

ರವೀಂದ್ರ ಜಡೇಜಾ 41/5,ಕುಲ್‍ದೀಪ್ ಯಾದವ್ 19/2, ಜಸ್‍ಪ್ರೀತ್ ಬೂಮ್ರಾ 18/1 ಹಾಗೂ ಆರ್ ಅಶ್ವಿನ್‍ 19/1 ವಿಕೆಟ್ ಕಬಳಿಸಿ ಭಾರತದ ಗೆಲುವಿನ ರೂವಾರಿಯಾದರು. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.

ಎರಡನೇ ಇನಿಂಗ್ಸ್‍ನಲ್ಲಿ 196/4 ವಿಕೆಟ್‍ನೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ಯಶಸ್ವಿ ಜೈಸ್ವಾಲ್ ಅವರ ಸ್ಫೋಟಕ ದ್ವಿಶತಕ 214, ಶುಭಮನ್‍ ಗಿಲ್ 91,ಸರ್ಫರಾಜ್‍ ಖಾನ್ 68 ರನ್‍ ಗಳಿಸಿ  430/4 ರನ್‍ ಕಲೆ ಹಾಕಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಯಶಸ್ವಿ ಜೈಸ್ವಾಲ್‍  ಒಂದೇ ಸರಣಿಯಲ್ಲಿ  ಎರಡು ದ್ವಿಶತಕ ಬಾರಿಸಿದ ಭಾರತದ ಮೂರನೇ ಆಟಗಾರರಾದರು. ಈ ಮೊದಲು ವಿನು ಮಕಂಡ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

ಸತತ ಎರಡನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ  200 ರನ್ ಬಾರಿಸಿದರು. 231 ಎಸೆತಗಳ ಅವರ ಆಟದಲ್ಲಿ 14 ಬೌಂಡರಿ ಹಾಗೂ 10 ಸ್ಫೋಟಕ  ಸಿಕ್ಸರ್‍ ಗಳಿದ್ದವು.

ಭಾರತ ಮೊದಲ ಇನಿಂಗ್ಸ್‍ನಲ್ಲಿ ನಾಯಕ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅವರ ಶತಕದೊಂದಿಗೆ 445 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಬೆನ್ ಡಕೆಟ್ ಶತಕದೊಂದಿಗೆ 319 ರನ್ ಗಳಿಸಿತು.

ನಾಲ್ಕನೇ ಟೆಸ್ಟ್ ರಾಂಚಿಯಲ್ಲಿ ಫೆ.23 ರಂದು ಆರಂಭವಾಗಲಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X