ಬಾಕ್ಸಿಂಗ್‌ ಡೇ ಟೆಸ್ಟ್ | ಮೊದಲ ದಿನ 300ರ ಗಡಿ ದಾಟಿದ ಆಸೀಸ್: ನಾಲ್ವರ ಅರ್ಧ ಶತಕ

Date:

Advertisements

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ಆರಂಭಿಕ ನಾಲ್ವರು ಬ್ಯಾಟರ್‌ಗಳ ಅರ್ಧ ಶತಕದ ನೆರವಿನಿಂದ 311/6 ರನ್‌ ಕಲೆ ಹಾಕಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ 19ರ ಯುವ ಯುವ ಆಟಗಾರ ಸ್ಯಾಮ್ ಕೊನ್‌ಸ್ಟಸ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 89 ರನ್​ಗಳ ಜೊತೆಯಾಟವಾಡಿದ ಬಳಿಕ ಕೊನ್‌ಸ್ಟಸ್ ವಿಕೆಟ್ ಒಪ್ಪಿಸಿದರು. ಆದರೆ ಇದಕ್ಕೂ ಮುನ್ನ ಯುವ ದಾಂಡಿಗ ತನ್ನ ಪಾದಾರ್ಪಣೆ ಪಂದ್ಯದಲ್ಲಿಯೆ ಕೇವಲ 65 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಬೌಂಡರಿಗಳೊಂದಿಗೆ 60 ರನ್​ ಚಚ್ಚಿದ್ದರು.

ಇದಾದ ಬಳಿಕ ಜೊತೆಗೂಡಿದ ಉಸ್ಮಾನ್ ಖ್ವಾಜಾ ಹಾಗೂ ಮಾರ್ನಸ್ ಲಾಬುಶೇನ್ 2ನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ 121 ಎಸೆತಗಳಲ್ಲಿ 57 ರನ್ ಬಾರಿಸಿದ್ದ ಖ್ವಾಜಾ ಬುಮ್ರಾ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಔಟಾದರು.

Advertisements

ಈ ಸುದ್ದಿ ಓದಿದ್ದೀರಾ? U19 ಮಹಿಳೆಯರ ಏಷ್ಯಾಕಪ್: ಭಾರತ ತಂಡ ಚಾಂಪಿಯನ್

ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಮಾರ್ನಸ್ ಲಾಬುಶೇನ್ 145 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 72 ರನ್​ ಸಿಡಿಸಿದರು.

ಮಾರ್ನಸ್ ಲಾಬುಶೇನ್ (72) ಔಟಾದ ಬಳಿಕ ಆಗಮಿಸಿದ ಸ್ಪೋಟಕ ಆಟಗಾರ ಟ್ರಾವಿಸ್ ಹೆಡ್ (0) ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಮಿಚೆಲ್ ಮಾರ್ಷ್ (4) ಕೂಡ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಆದಾಗ್ಯೂ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅನುಭವಿ ಆಟಗಾರ ಸ್ಟೀವ್ ಸ್ಮಿತ್, ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಜೊತೆಗೂಡಿ ಇನಿಂಗ್ಸ್ ಕಟ್ಟಿದರು. ಪರಿಣಾಮ 6ನೇ ವಿಕೆಟ್​ಗೆ 53 ರನ್​ಗಳ ಜೊತೆಯಾಟ ಮೂಡಿಬಂತು. ಈ ಹಂತದಲ್ಲಿ ಆಕಾಶ್ ದೀಪ್ ಎಸೆದ ಎಸೆತದಲ್ಲಿ ಅಲೆಕ್ಸ್ ಕ್ಯಾರಿ (31) ಔಟಾದರು. ಆದರೆ ಮತ್ತೊಂದೆಡೆ ಬಿರುಸಿನ ಆಟವಾಡಿದ ಸ್ಟೀವ್ ಸ್ಮಿತ್ 68 ರನ್​ಗಳೊಂದಿಗೆ ಅಜೇಯರಾಗಿ ಉಳಿದರು.

ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಮತ್ತೆ ತಮ್ಮ ಕರಾರುವಾಕ್ಕಾದ ಬೌಲಿಂಗ್ ಮೂಲಕ 3 ವಿಕೆಟ್ ಪಡೆದರೆ, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X