ಸಂತೋಷ್ ಟ್ರೋಫಿ | 54 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಕರ್ನಾಟಕ

Date:

  • ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯ
  • ಮೇಘಾಲಯ ವಿರುದ್ಧ 3-2 ಅಂತರದಿಂದ ಗೆದ್ದ ಕರ್ನಾಟಕ

ಕರ್ನಾಟಕದ ಫುಟ್‌ಬಾಲ್‌ ಅಭಿಮಾನಿಗಳ ಐದು ದಶಕಗಳ ಕನಸು ಕೊನೆಗೂ ನನಸಾಗಿದೆ. ಪ್ರತಿಷ್ಠಿತ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಕರ್ನಾಟಕ, 54 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರಿದೆ.

ಸೌದಿ ಅರೆಬಿಯದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ 76ನೇ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯದಲ್ಲಿ ಕರ್ನಾಟಕ, ಮೇಘಾಲಯವನ್ನು 3-2 ಗೋಲುಗಳ ಅಂತರದಿಂದ ಮಣಿಸಿ ಸಂಭ್ರಮದಲ್ಲಿ ತೇಲಾಡಿತು. ಇದರೊಂದಿಗೆ ವಿದೇಶಿ ನೆಲದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಯೂ ಕರ್ನಾಟಕ ತಂಡದ್ದಾಯಿತು.

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್‌) ಸೌದಿ ಅರೆಬಿಯ ಫುಟ್‌ಬಾಲ್ ಫೆಡರೇಶನ್‌ ಜೊತೆ ಎಂಒಯುಗೆ ಸಹಿ ಹಾಕಿದೆ. ಈ ಹಿನ್ನಲೆಯಲ್ಲಿ ಈ ಬಾರಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಸೆಮಿಫೈನಲ್ ಮತ್ತು ಫೈನಲ್‌ ಪಂದ್ಯಗಳನ್ನು ಸೌದಿ ಮೈದಾನಗಳಿಗೆ ಸ್ಥಳಾಂತರಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಂದ್ಯ ಪ್ರಾರಂಭವಾಗಿ ಎರಡೇ ನಿಮಿಷದಲ್ಲಿ ಕರ್ನಾಟಕ, ಎಂ ಸುನಿಲ್ ಕುಮಾರ್ ಮೂಲಕ ಗೋಲಿನ ಖಾತೆ ತೆರೆದಿತ್ತು. ಬಳಿಕ 19ನೇ ನಿಮಿಷದಲ್ಲಿ ಬೆಕಿ ಓರಮ್  ಹಾಗೂ ಮೊದಲಾರ್ಧದ ಅಂತಿಮ ನಿಮಿಷದಲ್ಲಿ ರಾಬಿನ್ ಯಾದವ್ ಗೋಲು ಗಳಿಸಿದ್ದರು. ಮತ್ತೊಂದೆಡೆ ಮೊದಲ ಬಾರಿಗೆ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಫೈನಲ್‌ ಪ್ರವೇಶಿಸಿದ್ದ ಮೇಘಾಲಯ ಪರ ಬ್ರೋಲಿಂಗ್ಟನ್ ವಾರ್ಲರ್‌ಪಿಹ್ (9ನೇ ನಿಮಿಷ) ಮತ್ತು 60ನೇ ನಿಮಿಷದಲ್ಲಿ ಶೀನ್ ಸ್ಟೀವನ್ಸನ್ ಗೋಲು ಗಳಿಸಿದ್ದರು. ಹೆಚ್ಚುವರಿ ಸಮಯದಲ್ಲಿ ಫಿಗೋ ಸಿಂಡೈ ಅವರ ಸುಂದರ ಪ್ರಯತ್ನವು ಗೋಲ್‌ ಪೋಸ್ಟ್‌ಗೆ ಬಡಿಯಿತಾದರೂ ಗೋಲು ದಾಖಲಾಗಲಿಲ್ಲ.

ಈ ಸುದ್ದಿ ಓದಿದ್ದೀರಾ?: ಐಎಸ್‌ಎಲ್‌; ಸುನಿಲ್‌ ಛೆಟ್ರಿ ಗೋಲಿನ ಬಳಿಕ ಹೈಡ್ರಾಮಾ, ಪಂದ್ಯದ ನಡುವೆಯೇ ಮೈದಾನ ತೊರೆದ ಕೇರಳ ಬ್ಲಾಸ್ಟರ್ಸ್

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...