ಸಂತೋಷ್ ಟ್ರೋಫಿ | 54 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಕರ್ನಾಟಕ

Date:

Advertisements
  • ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯ
  • ಮೇಘಾಲಯ ವಿರುದ್ಧ 3-2 ಅಂತರದಿಂದ ಗೆದ್ದ ಕರ್ನಾಟಕ

ಕರ್ನಾಟಕದ ಫುಟ್‌ಬಾಲ್‌ ಅಭಿಮಾನಿಗಳ ಐದು ದಶಕಗಳ ಕನಸು ಕೊನೆಗೂ ನನಸಾಗಿದೆ. ಪ್ರತಿಷ್ಠಿತ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಕರ್ನಾಟಕ, 54 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರಿದೆ.

ಸೌದಿ ಅರೆಬಿಯದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ 76ನೇ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯದಲ್ಲಿ ಕರ್ನಾಟಕ, ಮೇಘಾಲಯವನ್ನು 3-2 ಗೋಲುಗಳ ಅಂತರದಿಂದ ಮಣಿಸಿ ಸಂಭ್ರಮದಲ್ಲಿ ತೇಲಾಡಿತು. ಇದರೊಂದಿಗೆ ವಿದೇಶಿ ನೆಲದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಯೂ ಕರ್ನಾಟಕ ತಂಡದ್ದಾಯಿತು.

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್‌) ಸೌದಿ ಅರೆಬಿಯ ಫುಟ್‌ಬಾಲ್ ಫೆಡರೇಶನ್‌ ಜೊತೆ ಎಂಒಯುಗೆ ಸಹಿ ಹಾಕಿದೆ. ಈ ಹಿನ್ನಲೆಯಲ್ಲಿ ಈ ಬಾರಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಸೆಮಿಫೈನಲ್ ಮತ್ತು ಫೈನಲ್‌ ಪಂದ್ಯಗಳನ್ನು ಸೌದಿ ಮೈದಾನಗಳಿಗೆ ಸ್ಥಳಾಂತರಿಸಲಾಗಿತ್ತು.

Advertisements

ಪಂದ್ಯ ಪ್ರಾರಂಭವಾಗಿ ಎರಡೇ ನಿಮಿಷದಲ್ಲಿ ಕರ್ನಾಟಕ, ಎಂ ಸುನಿಲ್ ಕುಮಾರ್ ಮೂಲಕ ಗೋಲಿನ ಖಾತೆ ತೆರೆದಿತ್ತು. ಬಳಿಕ 19ನೇ ನಿಮಿಷದಲ್ಲಿ ಬೆಕಿ ಓರಮ್  ಹಾಗೂ ಮೊದಲಾರ್ಧದ ಅಂತಿಮ ನಿಮಿಷದಲ್ಲಿ ರಾಬಿನ್ ಯಾದವ್ ಗೋಲು ಗಳಿಸಿದ್ದರು. ಮತ್ತೊಂದೆಡೆ ಮೊದಲ ಬಾರಿಗೆ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಫೈನಲ್‌ ಪ್ರವೇಶಿಸಿದ್ದ ಮೇಘಾಲಯ ಪರ ಬ್ರೋಲಿಂಗ್ಟನ್ ವಾರ್ಲರ್‌ಪಿಹ್ (9ನೇ ನಿಮಿಷ) ಮತ್ತು 60ನೇ ನಿಮಿಷದಲ್ಲಿ ಶೀನ್ ಸ್ಟೀವನ್ಸನ್ ಗೋಲು ಗಳಿಸಿದ್ದರು. ಹೆಚ್ಚುವರಿ ಸಮಯದಲ್ಲಿ ಫಿಗೋ ಸಿಂಡೈ ಅವರ ಸುಂದರ ಪ್ರಯತ್ನವು ಗೋಲ್‌ ಪೋಸ್ಟ್‌ಗೆ ಬಡಿಯಿತಾದರೂ ಗೋಲು ದಾಖಲಾಗಲಿಲ್ಲ.

ಈ ಸುದ್ದಿ ಓದಿದ್ದೀರಾ?: ಐಎಸ್‌ಎಲ್‌; ಸುನಿಲ್‌ ಛೆಟ್ರಿ ಗೋಲಿನ ಬಳಿಕ ಹೈಡ್ರಾಮಾ, ಪಂದ್ಯದ ನಡುವೆಯೇ ಮೈದಾನ ತೊರೆದ ಕೇರಳ ಬ್ಲಾಸ್ಟರ್ಸ್

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X