ಕೇರಳ ಕ್ರಿಕೆಟ್ ಸಂಸ್ಥೆಯ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ

Date:

Advertisements

ಅಪ್ರಾಪ್ತ ಕ್ರಿಕೆಟ್‌ ಆಟಗಾರ್ತಿಯರ ಮೇಲೆ ಕೇರಳ ಕ್ರಿಕೆಟ್ ಕೋಚ್‌ ಒಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಕೇರಳ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿದೆ. ಆರೋಪಿ ಸದ್ಯ ಹುದ್ದೆಯಲ್ಲಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಅಪ್ರಾಪ್ತೆಯರ ದೂರಿನ ದಾಖಲು ಹಾಗೂ ವರದಿಯ ಘಟನೆಗಳಿಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿವರಣೆ ನೀಡುವಂತೆ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್ ನೀಡಿದೆ.

ಮಹಿಳಾ ಆಯೋಗವು ಮಾಧ್ಯಮ ವರದಿಗಳ ಆಧಾರದ ಮೇಲೆ ಸ್ವತಃ ಮಧ್ಯ ಪ್ರವೇಶಿಸಿ ದೂರು ದಾಖಲಿಸಿಕೊಂಡಿದೆ.

Advertisements

ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿ ಮನು ಎಂಬಾತ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 10 ವರ್ಷಗಳವರೆಗೂ ಕೋಚ್‌ ಆಗಿದ್ದು, ಪ್ರಸ್ತುತ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿ ಸೆರೆವಾಸ ಅನುಭವಿಸುತ್ತಿದ್ದಾನೆ.

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ 11 ಮಂದಿ ಆಸ್ಪತ್ರೆಗೆ ದಾಖಲು

ಮೊದಲ ದೂರಿನ ಆಧಾರದಲ್ಲಿ ಸಂತ್ರಸ್ತೆಯೊಬ್ಬರು ತಮಿಳುನಾಡಿನ ತೇನ್‌ಕಸಿ ಜಿಲ್ಲೆಯವರು ಎಂದು ಹೇಳಲಾಗಿದೆ. ಕ್ರಿಕೆಟ್ ತರಬೇತಿಗೆ ಬರುತ್ತಿದ್ದ ಈ ಸಂತ್ರಸ್ತೆಯ ಬೆತ್ತಲೆ ಚಿತ್ರಗಳನ್ನು ತೆಗೆದು ಲೈಂಗಿಕವಾಗಿ ದೌರ್ಜನ್ಯವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ.

ಘಟನೆಯ ನಂತರ ಸಂತ್ರಸ್ತೆಯು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಪೋಷಕರ ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ತಮಗೆ ಯಾವುದೇ ಮಾಹಿತಿಯಿರಲಿಲ್ಲ ಎಂದು ಕೇರಳ ಕ್ರಿಕೆಟ್ ಸಂಸ್ಥೆ ತಿಳಿಸಿರುವುದನ್ನು ಮಹಿಳಾ ಆಯೋಗ ತಿಳಿಸಿದೆ.

ಒಬ್ಬ ಸಂತ್ರಸ್ತೆ ದೂರು ನೀಡಿದ ನಂತರ ಹಲವು ಅಪ್ರಾಪ್ತೆಯರು ಕೋಚ್‌ನಿಂದ ತಮಗಾದ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X