‘ಕೊಲ್ಲಬೇಕೆನಿಸಿದರೆ ನಮ್ಮನ್ನು ಕೊಂದುಬಿಡಿ’; ಪೊಲೀಸರ ಅಮಾನವೀಯ ವರ್ತನೆಗೆ ವಿನೇಶ್ ಫೋಗಟ್ ಆಕ್ರೋಶ

Date:

ಗುರುವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬಗ್ಗೆ ದೆಹಲಿ ಪೊಲೀಸರ ಹಲ್ಲೆಯಿಂದ ಆಘಾತಕ್ಕೊಳಗಾದ ವಿಶ್ವ ಚಾಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಕಣ್ಣೀರಿಡುತ್ತಾ ಮಾತನಾಡಿದ ಅವರು, “ನೀವು ನಮ್ಮನ್ನು ಕೊಲ್ಲಲು ಬಯಸಿದರೆ ಕೊಂದುಬಿಡಿ, ಆದರೆ ಈ ರೀತಿ ಹಿಂಸಿಸಬೇಡಿ. ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನೂ ಸಹ ಸೇವಿಸಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕಿದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಆರೋಪಿಸಿದರು.

ಮಹಿಳಾ ಪೊಲೀಸ್ ಅಧಿಕಾರಿಗಳ ಗೈರು ಹಾಜರಿಯನ್ನು ಪ್ರಶ್ನಿಸಿದ ವಿನೇಶ್​​, “ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ? ನಾವು ಅಪರಾಧಿಗಳಲ್ಲ ನಾವು ಇದೆಲ್ಲವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕುಸ್ತಿಪಟುಗಳು ರಾತ್ರಿ ಮಲಗಲು ಮಡಚಬಹುದಾದ ಮಂಚಗಳನ್ನು ತರಲು ಹೋಗುತ್ತಿದ್ದಾಗ ಘಟನೆ ನಡೆದಿದೆ. ಪೊಲೀಸರು ಅನುಚಿತವಾಗಿ ವರ್ತಿಸಿದ್ದಲ್ಲದೆ, ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ಮಹಿಳೆಯರೊಂದಿಗೆ ಗೌರವವಾಗಿ ನಡೆದುಕೊಳ್ಳಬೇಕಾದ ಸಮಾಜದಲ್ಲಿ ಪೊಲೀಸರು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ಜಂತರ್‌ಮಂತರ್‌ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಿಕ್ಕಾಟ

“ಮಳೆ ಬಂದ ಕಾರಣ ಹಾಸಿಗೆಗಳು ಒದ್ದೆಯಾಗಿದ್ದವು. ಆದ್ದರಿಂದ ನಾವು ಮಲಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದೆವು. ಆದರೆ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ನಿಂದಿಸಿದ ಪೊಲೀಸ್ ಅಧಿಕಾರಿ ಧರ್ಮೇಂದ್ರ ಅವರು, ನಮ್ಮೊಂದಿಗೆ ಜಗಳವಾಡಿದರು. ಅವರು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರೂ ಅಲ್ಲ” ಎಂದು ಮಾಜಿ ಕುಸ್ತಿಪಟು ರಾಜ್‌ವೀರ್ ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ತಡರಾತ್ರಿ ನಡೆದ ವಾಗ್ವಾದದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಕುಸ್ತಿಪಟುಗಳ ಬೆಂಬಲಿಗರು ಹಾಸಿಗೆಗಳನ್ನು ತೆಗೆದುಕೊಳ್ಳದಂತೆ ತಡೆದ ನಂತರ ಆಕ್ರಮಣಕಾರಿಯಾಗಿ ವರ್ತಿಸಿದರು ಎಂದು ತಿಳಿಸಿದ್ದಾರೆ.

ಕಳೆದ ಜನವರಿ ತಿಂಗಳಿನಲ್ಲಿ ಭಾರತದ ಅಗ್ರಗಣ್ಯ ಕುಸ್ತಿಪಟುಗಳಾದ ವಿನೀಶ್ ಫೋಗಟ್, ಭಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪವನ್ನು ಮಾಡಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಿ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ದೆಹಲಿ ಪೊಲೀಸರಿಗೆ ದೂರನ್ನೂ ಸಹ ನೀಡಿದ್ದರು.

ಆದರೆ ದೂರು ನೀಡಿ ಮೂರು ತಿಂಗಳುಗಳು ಕಳೆದರೂ ಸಹ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಈಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...