ಟೆಸ್ಟ್ ಸರಣಿ | ನ್ಯೂಜಿಲೆಂಡ್‌ಗೆ ಐತಿಹಾಸಿಕ ಗೆಲುವು; ಟೀಮ್ ಇಂಡಿಯಾಗೆ ವೈಟ್‌ವಾಶ್ ಮುಖಭಂಗ

Date:

Advertisements

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ತಂಡದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡ ಗೆಲುವು ಕಂಡಿದೆ. ಈ ಮೂಲಕ ನ್ಯೂಜಿಲೆಂಡ್ ಭಾರತ ತಂಡವನ್ನು 3-0 ಅಂತರದಿಂದ ಸೋಲಿಸಿದೆ. ಈ ಮೂಲಕ ಟೀಮ್ ಇಂಡಿಯಾವನ್ನು ತವರೂರಲ್ಲೇ ವೈಟ್‌ವಾಶ್ ಮಾಡಿ ಇತಿಹಾಸ ಬರೆದಿದೆ.

ಅಂತಿಮ ಹಾಗೂ 3ನೇ ಟೆಸ್ಟ್​ ಪಂದ್ಯದಲ್ಲಿ ಕೇವಲ 147 ರನ್‌ಗಳ ಗುರಿಯನ್ನು ಭಾರತ ಹೊಂದಿತ್ತು. ಆದರೆ ಈ ಗುರಿಯನ್ನು ಬೆನ್ನಟ್ಟುವಲ್ಲಿಯೂ ಭಾರತ ತಂಡ ವಿಫಲವಾಗಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ತವರಿನಲ್ಲಿ ಸರಣಿ ವೈಟ್‌ವಾಶ್ ಮುಖಭಂಗಕ್ಕೆ ಟೀಮ್ ಇಂಡಿಯಾ ಗುರಿಯಾಗಿದೆ.

ಇದನ್ನು ಓದಿದ್ದೀರಾ? ಟೆಸ್ಟ್ ಸರಣಿ | ಭಾರತಕ್ಕೆ ಹೀನಾಯ ಸೋಲು; ನ್ಯೂಜಿಲೆಂಡ್‌ಗೆ ಐತಿಹಾಸಿಕ ಜಯ

Advertisements

ಬೆಂಗಳೂರು ಮತ್ತು ಪುಣೆ ಪಂದ್ಯದಲ್ಲಿ ಭಾರತ ತಂಡವು ಸೋಲು ಕಂಡಿತ್ತು. ಆದರೆ ಮುಂಬೈನಲ್ಲಿ ನಡೆದ ಟೆಸ್ಟ್‌ನಲ್ಲಿ ಕೊಂಚ ಮುನ್ನಡೆ ಕಂಡಿತ್ತು. ಆದರೆ ಅಜಾಜ್ ಪಟೇಲ್ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಬ್ಯಾಟರ್‌ಗಳು ಸೋಲಿಗೆ ಶರಣಾಗಿದ್ದಾರೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿ ರವೀಂದ್ರ ಜಡೇಜಾ ದಾಳಿಗೆ ನಲುಗಿ 235 ರನ್​ಗಳಿಗೆ ಆಲೌಟ್ ಆಯಿತು. ನಂತರ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 263 ರನ್ ಪಡೆದು 28 ರನ್​ಗಳ ಮುನ್ನಡೆ ಸಾಧಿಸಿತ್ತು.

ಇದರಿಂದಾಗಿ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ಮತ್ತೆ ರವೀಂದ್ರ ಜಡೇಜಾ ದಾಳಿಗೆ ತತ್ತರಿಸಿ, 147 ರನ್​ಗಳ ಗುರಿಯನ್ನು ಭಾರತಕ್ಕೆ ನೀಡಿತು. ಆದರೆ ಈ ಅಲ್ಪ ಗುರಿಯನ್ನು ಕೂಡಾ ತಲುಪುವಲ್ಲಿ ಭಾರತ ವಿಫಲವಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

Download Eedina App Android / iOS

X