ಐಪಿಎಲ್ | ಕೆಕೆಆರ್‌ಗೆ ಜಯ: ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದ ಮಿಚೆಲ್ ಸ್ಟಾರ್ಕ್

Date:

Advertisements

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸಂಘಟಿತ ಬೌಲಿಂಗ್‌ ದಾಳಿಯ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲಿಸಿದ್ದು, ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆಕೆಆರ್ ತಂಡವು, ಮುಂಬೈ ಪರ ಜಸ್ಪ್ರೀತ್ ಬುಮ್ರಾ ಮತ್ತು ನುವಾನ್ ತುಷಾರ ಬೌಲಿಂಗ್ ದಾಳಿಯ ನಡುವೆಯೂ ನಿಗದಿತ 20 ಓವರ್‌ಗಳಲ್ಲಿ ವೆಂಕಟೇಶ್‌ ಅಯ್ಯರ್‌ ಗಳಿಸಿದ ಅರ್ಧಶತಕದ ನೆರವಿನಿಂದ ಕೆಕೆಆರ್ 169 ರನ್ ಗಳಿಸಲಷ್ಟೆ ಶಕ್ತವಾಗಿತ್ತು.

ಈ ಸಾಧಾರಣ ಗುರಿಯನ್ನು ಬೆನ್ನಟ್ಟುವಲ್ಲಿ ಎಡವಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ತಂಡ, ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್‌ಗೆ 145 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ 24 ರನ್‌ಗಳಿಂದ ಸೋಲೊಪ್ಪಿಕೊಂಡಿತು.

Advertisements

ಕೆಕೆಆರ್ ತಂಡದ ಕರಾರುವಕ್ಕಾದ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ಮುಂಬೈ ಬ್ಯಾಟರ್‌ಗಳು, ವಿಕೆಟ್ ಒಪ್ಪಿಸುವ ಮೂಲಕ ಪೆವಿಲಿಯನ್ ಪರೇಡ್ ನಡೆಸಿದರು.

ಮುಂಬೈ ಪರ ಆರಂಭಿಕರಾಗಿ ಕಣಕ್ಕೀಳಿದ ಇಶಾನ್‌ ಕಿಶಾನ್ ಮತ್ತು ರೋಹಿತ್‌ ಶರ್ಮಾ ಜೋಡಿ ಮತ್ತೆ ಉತ್ತಮ ರನ್‌ ಕಲೆ ಹಾಕುವುದಲ್ಲಿ ಎಡವಿತು. ಒಂದು ಸಿಕ್ಸರ್‌ ಹಾಗೂ ಬೌಂಡರಿಗಷ್ಟೆ ಸೀಮಿತವಾದ ಇಶಾನ್ (13) ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು. ಬಳಿಕ ರೋಹಿತ್‌ ಶರ್ಮಾ ಕೂಡ 11 ರನ್‌ಗೆ ಸುನಿಲ್‌ ನರೈನ್‌ ಅವರಿಗೆ ಔಟ್‌ ಆದರು.

ತಂಡಕ್ಕೆ ಆಸರೆಯಾಗಬೇಕಿದ್ದ ನಾಯಕ ಹಾರ್ದಿಕ್‌ ಪಾಂಡ್ಯ ಕೇವಲ ಒಂದು ರನ್‌ಗೆ ಆಂಡ್ರೆ ರಸೆಲ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು.

ಮುಂಬೈನ ಸ್ಟಾರ್ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಅರ್ಧಶತಕ ಗಳಿಸಿ(56 ರನ್) ತಂಡವನ್ನು ಗೆಲುವಿಮ ಕಡೆಗೆ ಕೊಂಡೊಯ್ಯಲು ಶ್ರಮಿಸಿದರು. ಆದರೆ ಅದಕ್ಕೆ ಆ್ಯಂಡ್ರೂ ರಸೆಲ್ ಅವಕಾಶ ನೀಡಲಿಲ್ಲ. ತನ್ನ ಬೌಲಿಂಗ್‌ನಲ್ಲಿ ಸೂರ್ಯ ಕುಮಾರ್ ಕುಮಾರ್ ಅವರ ವಿಕೆಟ್ ಪಡೆಯುವ ಮೂಲಕ ಪಂದ್ಯವನ್ನು ಕೆಕೆಆರ್ ಕಡೆಗೆ ತಿರುಗಿಸಿದರು.

ಕೊನೆಯಲ್ಲಿ ಮುಂಬೈ ಗೆಲುವಿಗೆ ಹೋರಾಟ ನಡೆಸಿದ ಟಿಮ್‌ ಡೇವಿಡ್‌ 24 ರನ್‌ಗಳಿಸಿ ಮಿಚೆಲ್‌ ಸ್ಟಾರ್ಕ್‌ಗೆ ವಿಕೆಟ್‌ ನೀಡಿ ಹೊರ ನಡೆದರು. ಬಳಿಕ ಬಂದ ಪಿಯೂಷ್‌ ಚಾವ್ಲಾ ಹಾಗು ಕ್ರೀಸ್‌ನಲ್ಲಿದ್ದ ಜೆರಾಲ್ಡ್ ಕೋಟ್ಜಿ ಅವರನ್ನು ಮಿಚೆಲ್‌ ಸ್ಟಾರ್ಕ್‌ ಔಟ್‌ ಮಾಡಿದರು. ಹೀಗಾಗಿ ಮುಂಬೈ 18.5 ಓವರ್‌ಗಳಲ್ಲಿ ಅಲೌಟ್‌ ಆಗುವ ಮೂಲಕ ಕೆಕೆಆರ್‌ ಎದುರು ಪಂದ್ಯವನ್ನು 24 ರನ್‌ಗಳಿಂದ ಸೋಲಬೇಕಾಯಿತು.

ಮುಂಬೈನ‌ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ಕೆಕೆಆರ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.

ಕೆಕೆಆರ್‌ ಪರ ಮಿಚೆಲ್ ಸ್ಟಾರ್ಕ್ 4 ವಿಕೆಟ್‌ ಪಡೆದರೆ, ಸುನಿಲ್ ನರೈನ್, ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ 2 ವಿಕೆಟ್‌ ಕಬಳಿಸುವ ಮೂಲಕ ಕೆಕೆಆರ್‌ ಗೆಲುವಿನಲ್ಲಿ ತಮ್ಮದೇ ಕೊಡುಗೆ ನೀಡಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X