ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಕೊಹ್ಲಿ, ರೋಹಿತ್ ವಾಪಸ್: ಕೊನೆ ಪಂದ್ಯ ಬೆಂಗಳೂರಿನಲ್ಲಿ

Date:

ಜನವರಿ 11ರಿಂದ ಭಾರತದಲ್ಲಿ ನಡೆಯುವ ಅಫ್ಘಾನ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಗೆ ಕೊಹ್ಲಿ, ರೋಹಿತ್ ವಾಪಸ್‌ ಆಗಿದ್ದಾರೆ.

ಬಿಸಿಸಿಐ ಆಯ್ಕೆ ಮಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡಕ್ಕೆ ಇಬ್ಬರು ವಿಕೆಟ್ ಕೀಪರ್‌ಗಳಾದ ಜಿತೇಶ್ ಶರ್ಮಾ ಹಾಗೂ ಸಂಜು ಸ್ಯಾಮ್ಸ್‌ನ್‌ ಅವರಿಗೆ ಅವಕಾಶ ನೀಡಲಾಗಿದೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಶಿವಂ ದುಬೆ, ವಾಷಿಂಗ್ಟನ್‌ ಸುಂದರ್ ಹಾಗೂ ಅಕ್ಸರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೈಬಿಡಲಾಗಿದ್ದ ಅಕ್ಸರ್ ಪಟೇಲ್ ವಾಪಸ್‌ ಆಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಲೆಗ್‌ ಸ್ಪಿನ್ನರ್‌ಗಳ ಪೈಕಿ ರವಿ ಬಿಷ್ಣೋಯಿ, ಕುಲದೀಪ್ ಯಾದವ್, ವೇಗಿಗಳ ವಿಭಾಗದಲ್ಲಿ ಆವೇಶ್ ಖಾನ್, ಅರ್ಷದೀಪ್ ಸಿಂಗ್ ಹಾಗೂ ಮುಖೇಶ್ ಕುಮಾರ್ ಅವರಿಗೆ ಸ್ಥಾನ ನೀಡಲಾಗಿದೆ. ಬ್ಯಾಟ್ಸ್‌ಮನ್‌ಗಳಲ್ಲಿ ಶುಭಮನ್‌ ಗಿಲ್, ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್‌ ವರ್ಮಾ ಇದ್ದಾರೆ. ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್ ನಡೆಯುವ ಹಿನ್ನೆಲೆಯಲ್ಲಿ ಈ ಸರಣಿ ಪ್ರಮುಖವಾಗಿದೆ.

ಅಫ್ಘಾನ್‌ ವಿರುದ್ಧ ಆಡಲಿರುವ ಟೀಂ ತಂಡಿಯಾ ತಂಡ:

ರೋಹಿತ್ ಶರ್ಮಾ (ನಾಯಕ),ಶುಭಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಕುಲದೀಪ್‌ ಯಾದವ್, ಅರ್ಷದೀಪ್ ಸಿಂಗ್,  ಅವೇಶ್ ಖಾನ್, ಮುಖೇಶ್ ಕುಮಾರ್

ಪಂದ್ಯಗಳ ದಿನಾಂಕ:

ಜನವರಿ 11, ಮೊಹಾಲಿ

ಜನವರಿ 14, ಇಂಧೋರ್

ಜನವರಿ 17, ಬೆಂಗಳೂರು

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...