ಐಪಿಎಲ್‌ 2023 | ಕೆಕೆಆರ್‌ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ಆರ್‌ಸಿಬಿ

Date:

Advertisements

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ತಂಡಕ್ಕೆ ಕೆಕೆಆರ್‌ ತಡೆಒಡ್ಡಿದೆ.

ಗೆಲುವಿಗೆ ಕೆಕೆಆರ್‌ ಮುಂದಿಟ್ಟಿದ್ದ201 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟದಲ್ಲಿ 179 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ತವರು ಅಭಿಮಾನಿಗಳ ಸಮ್ಮುಖದಲ್ಲೇ 21 ರನ್‌ಗಳ ಅಂತರದಲ್ಲಿ ಕೋಲ್ಕತ್ತಾ ತಂಡಕ್ಕೆ ಶರಣಾಯಿತು.

ಈ ಗೆಲುವಿನೊಂದಿಗೆ ಪ್ರಸಕ್ತ ಟೂರ್ನಿಯಲ್ಲಿ ಸತತ 4 ಪಂದ್ಯಗಳ ಸೋಲಿನ ಸರಪಳಿಯನ್ನು ಕೆಕೆಆರ್‌ ತುಂಡರಿಸಿದೆ.

Advertisements

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನಾಯಕ ವಿರಾಟ್‌ ಕೊಹ್ಲಿ 54 ರನ್‌, ಮಹಿಪಾಲ್ ಲೋಮ್ರೋರ್ 34 ಹಾಗೂ ದಿನೇಶ್ ಕಾರ್ತಿಕ್ 22 ರನ್‌ಗಳಿಸಿದರು. ಎಂದಿನಂತೆ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬ್ಯಾಟರ್‌ಗಳು ತಂಡದ ಗೆಲುವಿಗಾಗಿ ಕ್ರೀಸ್‌ನಲ್ಲಿ ನೆಲೆಯೂರಲಿಲ್ಲ. ಗ್ಲೆನ್‌ ಮ್ಯಾಕ್ಸ್‌ವೆಲ್‌ 5 ಮತ್ತು ಶಹಬಾಝ್‌ ಅಹ್ಮದ್‌ 2 ರನ್‌ಗಳಿಸಲಷ್ಟೇ ಶಕ್ತರಾದರು.  

ಕೆಕೆಆರ್‌ ಪರ ವರುಣ್‌ ಚಕ್ರವರ್ತಿ 3,  ಆಂಡ್ರೆ ರಸೆಲ್‌ ಮತ್ತು ಸುಯಾಷ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು.  ಇದರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್‌ ಚಾಲೆಂಜರ್ಸ್‌ ತಂಡದ ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸತತ 5ನೇ ಗೆಲುವು ಸಾಧಿಸಿದಂತಾಗಿದೆ.

ಇದಕ್ಕೂ ಮೊದಲು ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌, ಕೋಲ್ಕತ್ತಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಆರಂಭಿಕ ಜೇಸನ್‌ ರಾಯ್‌ ಸತತ ಎರಡನೇ ಅರ್ಧಶತಕ ಮತ್ತು ನಾಯಕ ನಿತೀಶ್‌ ರಾಣಾ ಗಳಿಸಿದ ಬಿರುಸಿಬ 48 ರನ್‌ಗಳ ನೆರವಿನಿಂದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿತ್ತು. ನಾರಾಯಣ್‌ ಜಗದೀಶನ್‌ 27, ವೆಂಕಟೇಶ್‌ ಅಯ್ಯರ್‌ 31 ಹಾಗೂ ಕೊನೆಯಲ್ಲಿ ರಿಂಕು ಸಿಂಗ್‌ 18 ರನ್‌ಗಳಿಸಿ ಅಜೇಯರಾಗುಳಿದರು.  

ಆರ್‌ಸಿಬಿ ಪರ ವಿಜಯಕುಮಾರ್‌ ವೈಶಾಕ್‌ ಮತ್ತು ಸ್ಪಿನ್ನರ್ ವನಿಂದು ‌ ಹಸರಂಗ ತಲಾ 2 ವಿಕೆಟ್‌ ಪಡೆದರೆ, ಆಂಡ್ರೆ ರಸೆಲ್‌ ವಿಕೆಟ್‌ ಸಿರಾಜ್‌ ಪಾಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X