ಐಪಿಎಲ್ | ತವರಲ್ಲೇ ಬೃಹತ್ ಗುರಿ ಬೆನ್ನಟ್ಟಲು ಲಕ್ನೋ ವಿಫಲ: ಕೆಕೆಆರ್‌ಗೆ ಭರ್ಜರಿ ಜಯ

Date:

Advertisements

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 54ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತವರಲ್ಲೇ ಮುಗ್ಗರಿಸಿದ್ದು, ಕೆಕೆಆರ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ, ಸುನಿಲ್ ನರೇನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 6 ವಿಕೆಟ್ ಕಳೆದುಕೊಂಡು 236 ರನ್‌ಗಳ ಬೃಹತ್ ಗುರಿ‌ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಕನ್ನಡಿಗ ಕೆ ಎಲ್ ರಾಹುಲ್‌ ನೇತೃತ್ವದ ಲಕ್ನೋ ತಂಡವು, 16.1 ಓವರ್‌ಗಳಲ್ಲಿ ಕೇವಲ 138 ರನ್‌ಗಳು ಗಳಿಸುವಷ್ಟರಲ್ಲೇ ಆಲೌಟ್ ಆಯಿತು. ಆ ಮೂಲಕ 98 ರನ್‌ಗಳಿಂದ ಹೀನಾಯವಾಗಿ ಸೋಲು ಕಂಡಿತು.

Advertisements

ಬ್ಯಾಟಿಂಗ್‌ನಲ್ಲಿ ಲಕ್ನೋ ಪರ ಮಾರ್ಕ್ ಸ್ಟೋಯ್ನಿಸ್ 36 ಹಾಗೂ ನಾಯಕ ಕೆ ಎಲ್ ರಾಹುಲ್‌ 25 ರನ್ ಗಳಿಸಿದ್ದು ಬಿಟ್ಟರೆ, ಬೇರೆ ಯಾವ ಬ್ಯಾಟರ್‌ಗಳು ಕೆಕೆಆರ್ ಬೌಲಿಂಗ್ ದಾಳಿಯನ್ನು ಮೆಟ್ಟಿ, ರನ್ ಗಳಿಸಲು ಪರದಾಡಿದರು.

ಅರ್ಶಿನ್ ಕುಲಕರ್ಣಿ 9, ದೀಪಕ್ ಹೂಡಾ 5, ನಿಕೊಲಸ್ ಪೂರನ್ 10, ಆಯುಷ್ ಬದೌನಿ 15, ಟರ್ನರ್ 16, ಕೃನಾಲ್ ಪಾಂಡ್ಯಾ 5 ರನ್ ಗಳಿಸಿ, ವಿಕೆಟ್ ಒಪ್ಪಿಸಿದರು.

ಕೆಕೆಆರ್ ತಂಡದ ಪರವಾಗಿ ಮಾರಕ ಬೌಲಿಂಗ್‌ ದಾಳಿ ನಡೆಸಿದ ವರಣ್ ಚಕ್ರವರ್ತಿ ಹಾಗೂ ಹರ್ಷಿತ್ ರಾಣಾ ತಲಾ ಮೂರು ವಿಕೆಟ್, ಆ್ಯಂಡ್ರೆ ರಸ್ಸೆಲ್ 2 ವಿಕೆಟ್ ಗಳಿಸಿದರು. ಸುನಿಲ್ ನರೇನ್ ಹಾಗೂ ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಲಕ್ನೋ ವಿರುದ್ಧದ ಇಂದಿನ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಕೆಕೆಆರ್ ಒಟ್ಟು 11 ಪಂದ್ಯದಲ್ಲಿ ಎಂಟು ಗೆಲುವು ಹಾಗೂ ಮೂರು ಸೋಲಿನೊಂದಿಗೆ ಒಟ್ಟು ಸರಾಸರಿ 1.45 ನೆಟ್ ರನ್‌ರೇಟ್ ಗಳಿಸಿದೆ. ಆ ಮೂಲಕ ರಾಜಸ್ಥಾನ ತಂಡವನ್ನು ಹಿಂದಿಕ್ಕಿ, ಮೊದಲ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X