ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

Date:

Advertisements

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆ ತರಲಾಗುವುದು ಎಂದು ಭಾರಿ ಪ್ರಚಾರ ನೀಡಿದ್ದ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ತನ್ನ ಕೇರಳ ಭೇಟಿಯನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಆ ಮೂಲಕ, ವಿಶ್ವ ಚಾಂಪಿಯನ್ನರನ್ನು ಕರೆತರುವ ಪ್ರಯತ್ನ ಮಾತ್ರ ವಿಫಲವಾಗದೆ, ಈ ಪ್ರಯತ್ನಕ್ಕಾಗಿ ಈಗಾಗಲೇ ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ರಾಜ್ಯದ ಬೊಕ್ಕಸಕ್ಕೆ ಇದರಿಂದ ಯಾವುದೇ ಹೊರೆಯಾಗುವುದಿಲ್ಲ ಎಂಬ ಸರ್ಕಾರದ ಪ್ರತಿಪಾದನೆಯೂ ಸುಳ್ಳು ಎಂಬ ಸಂಗತಿ ಬಯಲಾಗಿದೆ.

ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ನೀಡಿರುವ ಮಾಹಿತಿಯ ಪ್ರಕಾರ, ಅರ್ಜೆಂಟೀನಾ ಫುಟ್‌ಬಾಲ್ ತಂಡದ ಅಧಿಕಾರಿಗಳನ್ನು ಭೇಟಿ ಮಾಡಲು ಸ್ಪೇನ್‌ಗೆ ತೆರಳಿದ್ದ ಕ್ರೀಡಾ ಸಚಿವ ವಿ.ಅಬ್ದುರಹಿಮಾನ್ ನೇತೃತ್ವದ ನಿಯೋಗದ ಭೇಟಿಗಾಗಿ 13 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಬಹಿರಂಗವಾಗಿದೆ.

Advertisements

ಇದನ್ನು ಓದಿದ್ದೀರಾ? ಟೆಸ್ಟ್ ಸರಣಿಯಲ್ಲಿ ವಿಶ್ವ ದಾಖಲೆ ಬರೆದ ಭಾರತ ತಂಡ

ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆತರಲಾಗುವುದು ಎಂದು ರಾಜ್ಯ ಸರಕಾರ ಕಳೆದ ವರ್ಷ ಘೋಷಿಸಿತ್ತು. ಇದು ಫುಟ್ ಬಾಲ್ ಹುಚ್ಚಿಗೆ ಹೆಸರುವಾಸಿವಾಗಿರುವ ಕೇರಳವನ್ನು ರೋಮಾಂಚನಗೊಳಿಸಿತ್ತು. ಆದರೆ, ಪ್ರಾಯೋಜಕರು ಅಗತ್ಯ ಮೊತ್ತವನ್ನು ಪಾವತಿಸಿದ್ದರೂ, ಅರ್ಜೆಂಟೀನಾ ತಂಡ ಕೇರಳಕ್ಕೆ ಭೇಟಿ ನೀಡುತ್ತಿಲ್ಲ ಎಂದು ಕೆಲ ದಿನಗಳ ಹಿಂದಷ್ಟೆ ಕ್ರೀಡಾ ಸಚಿವರು ಮಾಹಿತಿ ನೀಡಿದ್ದರು.

ಅರ್ಜೆಂಟೀನಾ ತಂಡದ ಭೇಟಿಯನ್ನು ತಾತ್ಕಾಲಿಕವಾಗಿ ಅಕ್ಟೋಬರ್ ತಿಂಗಳಲ್ಲಿ ಯೋಜಿಸಲಾಗಿತ್ತು. ಆದರೆ, ಈ ಯೋಜನೆಯನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕು ಎಂದು ಅರ್ಜೆಂಟೀನಾ ತಂಡ ಬಯಸಿತ್ತು. ಅರ್ಜೆಂಟೀನಾ ತಂಡದ ಈ ಕೋರಿಕೆಗೆ ಸಮ್ಮತಿಸಲು ಪ್ರಾಯೋಜಕರು ಸಿದ್ಧರಿರಲಿಲ್ಲ ಎಂದು ಹೇಳಲಾಗಿದೆ.

ಉತ್ತರ ಕೇರಳ ಜಿಲ್ಲೆಗಳಾದ ಮಲಪ್ಪುರಂ ಹಾಗೂ ಕೋಯಿಕ್ಕೋಡ್ ಜಿಲ್ಲೆಗಳು ಫುಟ್‌ಬಾಲ್ ಹುಚ್ಚಿಗೆ ಹೆಸರುವಾಸಿಯಾಗಿವೆ. ಕಳೆದ ವಿಶ್ವಕಪ್ ಸಂದರ್ಭದಲ್ಲಿ ಕೋಯಿಕ್ಕೋಡ್‌ನ ನದಿಯ ಬಳಿ ಬೃಹತ್ ಗಾತ್ರದ ಜನಪ್ರಿಯ ಫುಟ್‌ಬಾಲ್ ಆಟಗಾರರ ಕಟೌಟ್‌ಗಳನ್ನು ನಿಲ್ಲಿಸಿದ್ದದ್ದು ಫೀಫಾ ಗಮನವನ್ನೂ ಸೆಳೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ...

Download Eedina App Android / iOS

X