ಸ್ಟೇಡಿಯಂನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರ ಮೇಲೆ ದಾಳಿ

Date:

Advertisements

ಇಂಡಿಯನ್ ಸೂಪರ್ ಲೀಗ್ 2024-2025ರ (ಐಸಿಎಲ್) ಫೈನಲ್ ಪಂದ್ಯದ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ (ಎಂಜಿಎಸ್‌ಜಿ) ತಂಡದ ಕೆಲ ಅಭಿಮಾನಿಗಳು ಬೆಂಗಳೂರು ಎಫ್​ಸಿ ತಂಡದ ಮಾಲೀಕ ಪಾರ್ಥ್ ಜಿಂದಾಲ್ ಮೇಲೆ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಏಪ್ರಿಲ್ 12 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಐಎಸ್‌ಎಲ್ ಫೈನಲ್‌ನಲ್ಲಿ ಮೋಹನ್ ಬಗಾನ್ ಸೂಪರ್ ಜೈಂಟ್ಸ್​ ಹಾಗೂ ಬೆಂಗಳೂರು ಎಫ್‌ಸಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ವೀಕ್ಷಿಸಲು ಪಾರ್ಥ್ ಜಿಂದಾಲ್ ಕೂಡ ಸ್ಟೇಡಿಯಂನಲ್ಲಿ ಹಾಜರಿದ್ದರು. ಈ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ ತಂಡದ ಅಭಿಮಾನಿಗಳು ತಮ್ಮ ಮಾಲೀಕರ ಮೇಲೆ ಪಟಾಕಿಗಳೊಂದಿಗೆ ನಡೆಸಿದ್ದಾರೆ ಎಂದು ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಆರೋಪಿಸಿದೆ.

ಪಾರ್ಥ್ ಜಿಂದಾಲ್ ಐಪಿಎಲ್​ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರು ಹೌದು. ಹಾಗೆಯೇ ಇಂಡಿಯನ್ ಸೂಪರ್ ಲೀಗ್ ಫುಟ್​ಬಾಲ್​ ಟೂರ್ನಿಯಲ್ಲಿ ಬೆಂಗಳೂರು ಎಫ್​ಸಿ ತಂಡದ ಮಾಲೀಕತ್ವವನ್ನು ಹೊಂದಿದ್ದಾರೆ. ಹೀಗಾಗಿ ಬೆಂಗಳೂರು ತಂಡದ ಫೈನಲ್ ಪಂದ್ಯವನ್ನು ವೀಕ್ಷಿಸಲು ಪಾರ್ಥ್ ಜಿಂದಾಲ್ ​ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಹಾಜರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಧೋನಿ ಔಟ್‌ ಇಲ್ಲದಿದ್ದರೂ ವಿವಾದಾತ್ಮಕ ತೀರ್ಪು ನೀಡಿದ ಅಂಪೈರ್

ಈ ವೇಳೆ ಮೋಹನ್ ಬಗಾನ್ ಅಭಿಮಾನಿಗಳ ಒಂದು ಗುಂಪು ಪಾರ್ಥ್ ಅವರ ಮೇಲೆ ಉದ್ದೇಶಪೂರ್ವಕವಾಗಿ ಪಟಾಕಿಗಳೊಂದಿಗೆ ದಾಳಿ ನಡೆಸಿದ್ದಾರೆ. ಅಲ್ಲದೆ ಬೆಂಗಳೂರು ಎಫ್​ಸಿ ಬೆಂಬಲಿಗರ ಮೇಲೂ ಪಟಾಕಿಗಳನ್ನು ಎಸೆದಿದ್ದಾರೆ. ಇದರಿಂದಾಗಿ ಬಿಎಫ್‌ಸಿ ಅಭಿಮಾನಿಯ ಕಣ್ಣಿಗೆ ಗಾಯವಾಗಿದೆ ಎಂದು ಬಿಎಫ್​ಸಿ ಆರೋಪಿಸಿದೆ. ಘಟನೆ ವೇಳೆ ಪಾರ್ಥ್ ಅವರಗೂ ಗಾಯವಾಗಿದೆ.

ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡವು ಐಪಿಎಲ್​ನ ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರ ಒಡೆತನದಲ್ಲಿದೆ. ಇದೀಗ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡದ ಅಭಿಮಾನಿಗಳ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಬಿಎಫ್‌ಸಿ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದೆ.

ಈ ವಿಷಯದಲ್ಲಿ ಬಿಎಫ್‌ಸಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮತ್ತು ಐಎಸ್‌ಎಲ್ ಸಂಘಟಕರಾದ ಎಫ್‌ಎಸ್‌ಡಿಎಲ್‌ಗೆ ಔಪಚಾರಿಕ ದೂರು ನೀಡಿದೆ. ಈ ಘಟನೆಯನ್ನು ಗಂಭೀರವಾಗಿ ತನಿಖೆ ಮಾಡಿ ಭವಿಷ್ಯದಲ್ಲಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕ್ಲಬ್ ಒತ್ತಾಯಿಸಿದೆ.

ಫುಟ್​ಬಾಲ್ ಪ್ರಿಯರಿಗೆ ಕ್ರೀಡಾಂಗಣಗಳು ಸುರಕ್ಷಿತ ಸ್ಥಳಗಳಾಗಿರಬೇಕು. ಇಂತಹ ಘಟನೆಗಳಿಗೆ ಫುಟ್‌ಬಾಲ್ ಅಥವಾ ಯಾವುದೇ ಕ್ರೀಡೆಯಲ್ಲಿ ಸ್ಥಾನವಿಲ್ಲ ಎಂದು ಬೆಂಗಳೂರು ಫುಟ್​ಬಾಲ್ ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X