ಕೆ ಎಲ್ ರಾಹುಲ್ ವಿರುದ್ಧ ಲಖನೌ ತಂಡದ ಮಾಲೀಕರ ಆಕ್ರೋಶ ? ವಿಡಿಯೋ ವೈರಲ್

Date:

Advertisements

ಹೈದರಾಬಾದ್‌ನಲ್ಲಿ ನಿನ್ನೆ ನಡೆದ 2024ನೇ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಎಸ್‌ಆರ್‌ಹೆಚ್‌ ವಿರುದ್ಧ ಎಲ್‌ಎಸ್‌ಜಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಲಖನೌ ಸೋತ ನಂತರ ತಂಡದ ಮಾಲೀಕರಾದ ಸಂಜೀವ್‌ ಗೋಯಂಕಾ ಅವರು ನಾಯಕ ಕೆ ಎಲ್‌ ರಾಹುಲ್‌ ವಿರುದ್ಧ ವಿಐಪಿ ಗ್ಯಾಲರಿಯಲ್ಲಿ ಆಕ್ರೋಶಭರಿತವಾಗಿ ಮಾತನಾಡುತ್ತಿದ್ದ ದೃಶ್ಯ ಎಲ್ಲಡೆ ವೈರಲ್‌ ಆಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿರುವ ದೃಶ್ಯದಲ್ಲಿ ವಿಐಪಿ ಗ್ಯಾಲರಿಯಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ಮಾಲೀಕರಾದ ಸಂಜೀವ್‌ ಗೋಯಂಕಾ ಅವರೊಂದಿಗೆ ಆಕ್ರೋಶಭರಿತವಾಗಿ ಮಾತನಾಡುತ್ತಿದ್ದರು. ಮಾಲೀಕರ ಮಾತನ್ನು ಕೇಳಿಸಿಕೊಳ್ಳುತ್ತಿದ್ದ ರಾಹುಲ್ ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಗೋಯಂಕಾ ಮಾತು ಮುಂದುವರೆಸುತ್ತಿದ್ದರು. ದೃಶ್ಯ ಮಾತ್ರ ಕಾಣಿಸುತ್ತಿದ್ದರಿಂದ ಏನು ಮಾತನಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿರಲಿಲ್ಲ.

ಮೇ. 8ರಂದು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಖನೌ ತಂಡ 10 ವಿಕೆಟ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು. ಎಲ್‌ಎಸ್‌ಜಿ ತಂಡ ನೀಡಿದ 165 ರನ್‌ಗಳ ಸವಾಲನ್ನು ಬೆನ್ನಟ್ಟಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಕೇವಲ 9.4 ಓವರ್‌ಗಳಲ್ಲಿ ಗುರಿಯನ್ನು ಮುಟ್ಟಿತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್‌ ಶರ್ಮಾ ಅವರ ಭರ್ಜರಿ ಆಟದಿಂದ ಎಲ್‌ಎಸ್‌ಜಿ ಸುಲಭವಾಗಿ ಗುರಿಯನ್ನು ಸಾಧಿಸಿತು. ಇಷ್ಟು ಕಡಿಮೆ ಓವರ್‌ಗಳಲ್ಲಿ ಗೆಲುವು ಸಾಧಿಸಿದ್ದು, ಟಿ20 ಮಾದರಿಯಲ್ಲಿ ದಾಖಲೆಯಾಗಿ ಪರಿಣಮಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

ಟ್ರಾವಿಸ್‌ ಹೆಡ್‌ ಕೇವಲ 30 ಚೆಂಡುಗಳಲ್ಲಿ 8 ಬೌಂಡರಿ ಹಾಗೂ 8 ಸಿಕ್ಸರ್‌ಗಳೊಂದಿಗೆ 89 ರನ್‌ ಬಾರಿಸಿದರೆ, ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 6 ಸಿಕ್ಸರ್‌, 8 ಬೌಂಡರಿಯೊಂದಿಗೆ 75 ರನ್‌ ಸಿಡಿಸಿದರು.

ಈ ಸೋಲಿನೊಂದಿಗೆ ಎಲ್‌ಎಸ್‌ಜಿ ತಂಡ ಅಂಕಪಟ್ಟಿಯಲ್ಲಿ 12 ಅಂಕದೊಂದಿಗೆ 6ನೇ ಸ್ಥಾನದಲ್ಲಿದೆ. ನೆಟ್‌ ರನ್‌ರೇಟ್‌ ಕಡಿಮೆಯಿರುವ ಕಾರಣ ಉಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಪ್ಲೇಆಫ್‌ ಸುತ್ತಿಗೆ ಪ್ರವೇಶಿಸುವುದು ಕಷ್ಟವಾಗಿದೆ. ಕೆಕೆಆರ್‌ ಹಾಗೂ ರಾಜಸ್ಥಾನ 11 ಪಂದ್ಯಗಳನ್ನು ಆಡಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿವೆ. ಹೈದರಾಬಾದ್‌ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಈ ಮೂರು ತಂಡಗಳಿಗೆ ಪ್ಲೇಆಫ್‌ ಹಾದಿ ಸುಲಭ ಸಾಧ್ಯತೆಯಿದೆ.

ತಲಾ 12 ಅಂಕ ಗಳಿಸಿರುವ ಲಖನೌ, ಚೆನ್ನೈ, ದೆಹಲಿ ಪ್ಲೇಆಫ್‌ ಹಾದಿಗೆ ಪೈಪೋಟಿ ನಡೆಸಬೇಕಿದೆ. ಎಲ್ಲ ತಂಡಗಳ ಲೀಗ್‌ ಹಂತದ ಪಂದ್ಯಗಳು ಇನ್ನು ಮುಗಿಯದ ಕಾರಣ ಮೊದಲ ನಾಲ್ಕು ಸ್ಥಾನ ಗಳಿಸಲು ಪ್ರತಿ ತಂಡಕ್ಕೂ ಗೆಲುವು ಅನಿವಾರ್ಯವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X