ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

Date:

Advertisements

ಲಖನೌ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಥಿ ಅವರು ಲೀಗ್‌ನ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಐಪಿಎಲ್ ಆಡಳಿತ ಮಂಡಳಿಯು ಒಂದು ಪಂದ್ಯದ ಅಮಾನತು ಶಿಕ್ಷೆಯನ್ನು ವಿಧಿಸಿದೆ.

ನಿನ್ನೆ ನಡೆದ ಎಸ್‌ಆರ್‌ಎಚ್‌ – ಎಲ್‌ಎಸ್‌ಜಿ ತಂಡದ ನಡುವಿನ ಪಂದ್ಯದಲ್ಲಿ ಹೈದರಾಬಾದ್‌ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡಿದ ಬಳಿಕ ಎಲ್ಎಸ್‌ಜಿ ಸ್ಪಿನ್ನರ್ ದಿಗ್ವೇಶ್ ರಾಥಿ, ನೋಟ್ ಬುಕ್ ರೀತಿಯಲ್ಲಿ ಸಂಭ್ರಮಿಸಿದರು.ಈ ಋತುವಿನಲ್ಲಿ ಮೂರನೇ ಬಾರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಿಗ್ವೇಶ್ ತಪ್ಪಿತಸ್ಥರೆಂದು ಬಿಸಿಸಿಐ ತೀರ್ಪು ನೀಡಿದೆ. ಆದ್ದರಿಂದ, ಸ್ಪಿನ್ನರ್‌ಗೆ ಪಂದ್ಯ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಯಿತು ಜೊತೆಗೆ ಗುಜರಾತ್ ಟೈಟಾನ್ಸ್ ವಿರುದ್ಧದ ಎಲ್‌ಎಸ್‌ಜಿಯ ಮುಂದಿನ ಪಂದ್ಯದಿಂದ ಅಮಾನತುಗೊಳಿಸಲಾಗಿದೆ.

“ಬಿಸಿಸಿಐನ ಆರ್ಟಿಕಲ್ 2.5 ರ ಅಡಿಯಲ್ಲಿ ಇದು ದಿಗ್ವೇಶ್ ಅವರ ಮೂರನೇ ಲೆವೆಲ್ 1 ಅಪರಾಧವಾಗಿದೆ. ಈ ತಪ್ಪಿನಿಂದಾಗಿ ಅವರು ಎರಡು ಋಣಾತ್ಮಕ ಅಂಕಗಳನ್ನು ಸಂಗ್ರಹಿಸಿದ್ದಾರೆ. ಈ ಮೊದಲು ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಒಂದು ಋಣಾತ್ಮಕ ಅಂಕ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ಋಣಾತ್ಮಕ ಅಂಕಗಳನ್ನು ಸಂಗ್ರಹಿಸಿದ್ದರು” ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಐಪಿಎಲ್ 2025: ಪ್ಲೇ ಆಫ್‌ನಲ್ಲಿ ಯಾರ್ಯಾರು ಆಡುವುದಿಲ್ಲ: ಆಟಗಾರರ ಪಟ್ಟಿ ಇಲ್ಲಿದೆ

“ಈ ಋತುವಿನಲ್ಲಿ ದಿಗ್ವೇಶ್ ಐದು ಋಣಾತ್ಮಕ ಅಂಕಗಳನ್ನು ಹೊಂದಿರುವುದರಿಂದ ಒಂದು ಪಂದ್ಯದ ಅಮಾನತು ಶಿಕ್ಷೆ ವಿಧಿಸಲಾಗುತ್ತದೆ. ಮೇ 22ರಂದು ಅಹಮದಾಬಾದ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಎಲ್‌ಎಸ್‌ಜಿ ವಿರುದ್ಧದ ಮುಂದಿನ ಪಂದ್ಯಕ್ಕೆ ದಿಗ್ವೇಶ್ ಅವರನ್ನು ಅಮಾನತುಗೊಳಿಸಲಾಗುತ್ತದೆ” ಎಂದು ತಿಳಿಸಲಾಗಿದೆ.

ದಿಗ್ವೇಶ್ ರಥಿ ಈ ರೀತಿ ಸಂಭ್ರಮಿಸಿದ್ದಕ್ಕಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ದಿಗ್ವೇಶ್ ರಥಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರ ನಡುವೆಯೂ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಇಬ್ಬರ ನಡುವಣ ಜಗಳವು ತಾರಕ್ಕೇರುತ್ತಿದ್ದಂತೆ ಅಂಪೈರ್ ಹಾಗೂ ಸಹ ಆಟಗಾರರು ಮಧ್ಯ ಪ್ರವೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Digvesh as youngester should learn how behave on field
    as all spectators observing on going match.
    If same thing is happened all amount match should be collected.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X