ಐಪಿಎಲ್ | ಯಶ್ ಠಾಕೂರ್‌ಗೆ 5 ವಿಕೆಟ್ ಗೊಂಚಲು: ಗುಜರಾತ್‌ ಅನ್ನು ಸೋಲಿಸಿದ ಲಕ್ನೋ ಸೂಪರ್ ಜೈಂಟ್ಸ್‌

Date:

Advertisements

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು 33 ರನ್‌ಗಳಿಂದ ಸೋಲಿಸಿದೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮಾರ್ಕ್‌ ಸ್ಟೋಯ್ನಿಸ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತ್ತು.

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲಗೊಂಡ ಶುಭ್‌ಮನ್‌ ಗಿಲ್ ನೇತೃತ್ವದ ಗುಜರಾತ್ ತಂಡ, ಯಶ್ ಠಾಕೂರ್‌ ಅವರ ದಾಳಿಗೆ ಬಲಿಯಾಗಿ 18.5 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟಾಯಿತು. ಲಕ್ನೋ ಪರ 3.5 ಓವರ್‌ಗಳನ್ನು ಎಸೆದ ಯಶ್ ಠಾಕೂರ್‌, ಕೇವಲ 30 ರನ್ ನೀಡಿ 5 ವಿಕೆಟ್‌ಗಳನ್ನು ಕಿತ್ತರು. ಆ ಮೂಲಕ ಈ ಸೀಸನ್‌(2024)ನಲ್ಲಿ 5 ವಿಕೆಟ್ ಗೊಂಚಲು ಪಡೆದ ಮೊದಲ ಬೌಲರ್ ಆಗಿ ಗುರುತಿಸಿಕೊಂಡರು.

Advertisements

ಶುಭ್​ಮನ್ ಗಿಲ್ 21 ಎಸೆತಗಳಲ್ಲಿ 19 ರನ್ ಗಳಿಸಿ ಔಟಾದರೆ, ರಾಹುಲ್ ತೆವಾಟಿಯಾ 30 ರನ್ ಗಳಿಸಿದರು. 31 ರನ್ ಗಳಿಸಿದ ಸಾಯಿ ಸುದರ್ಶನ್ ಗುಜರಾತ್ ಪರ ಹೆಚ್ಚು ಸ್ಕೋರರ್ ಎನಿಸಿದರು. 1 ರನ್ ಗಳಿಸಿದ್ದ ನ್ಯೂಜಿಲ್ಯಾಂಡಿನ ಕೇನ್ ವಿಲಿಯಮ್ಸನ್ ರವಿ ಬಿಷ್ಣೋಯ್ ಹಿಡಿದ ಅದ್ಭುತ ಕಾಟ್ & ಬೌಲ್ಢ್ ಕ್ಯಾಚ್‌ಗೆ ಬಲಿಯಾದರು. ಕೇನ್ ವಿಲಿಯಮ್ಸನ್ ತನ್ನತ್ತ ಬಾರಿಸಿದ್ದ ಚೆಂಡನ್ನು ಅದ್ಭುತವಾಗಿ ಹಕ್ಕಿಯಂತೆ ಹಾರಿ ಹಿಡಿಯುವ ಮೂಲಕ ಪೆವಿಲಿಯನ್ ಹಾದಿ ತೋರಿಸಿದರು.

ಕೊನೆಯಲ್ಲಿ ಗುಜರಾತ್ ಟೈಟನ್ಸ್ ತಂಡವು 18.5 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟಾಯಿತು. ಲಕ್ನೋ ಹಾಗೂ ಗುಜರಾತ್ ಈವರೆಗೆ ಐಪಿಎಲ್‌ನಲ್ಲಿ ಆಡಿದ್ದ 4 ಪಂದ್ಯಗಳಲ್ಲಿ ಗುಜರಾತ್ ಮೇಲುಗೈ ಸಾಧಿಸಿತ್ತು. ಐದನೇ ಪಂದ್ಯದಲ್ಲಿ ಲಕ್ನೋ ತಂಡವು ಜಯಗಳಿಸುವ ಮೂಲಕ ಗುಜರಾತ್ ವಿರುದ್ಧ ಮೊದಲ ಗೆಲುವು ಪಡೆಯಿತು.

ಲಕ್ನೋ ತಂಡದ ಪರ ಯಶ್ ಠಾಕೂರ್ 5 ವಿಕೆಟ್ ಹೊರತುಪಡಿಸಿ, ಕೃನಾಲ್ ಪಾಂಡ್ಯಾ 3, ರವಿ ಬಿಷ್ಣೋಯ್ ಹಾಗೂ ನವೀನ್ ಉಲ್ ಹಕ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X