ಐಪಿಎಲ್‌ 2023 | ಪೂರನ್, ಸ್ಟೊಯಿನಿಸ್‌ ಸ್ಫೋಟಕ ಆಟಕ್ಕೆ ಶರಣಾದ ಆರ್‌ಸಿಬಿ; ಲಖನೌಗೆ ಮೂರನೇ ಗೆಲುವು

Date:

Advertisements

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಷರಶಃ ಸಿಕ್ಸರ್‌, ಬೌಂಡರಿಗಳ ಸುರಿಮಳೆಯೇ ನಡೆಯಿತು. ಆದರೆ ಭರ್ಜರಿ ಆಟದಲ್ಲಿ ಆರ್‌ಸಿಬಿ ವಿರುದ್ಧ ಮೇಲುಗೈ ಸಾಧಿಸಿ ಗೆಲುವು ಸಾಧಿಸಿದ್ದು ಕೆ ಎಲ್‌ ರಾಹುಲ್‌ ನೇತೃತ್ವದ ಲಖನೌ ಸೂಪರ್‌ ಜೈಂಟ್ಸ್.

ಐಪಿಎಲ್‌ನ 16ನೇ ಆವೃತ್ತಿಯ ಪಂದ್ಯದಲ್ಲಿ ಲಖನೌ ತಂಡ ನಿಕೋಲಸ್ ಪೂರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ 1 ವಿಕೆಟ್‌ ರೋಚಕ ಜಯ ಸಾಧಿಸಿತು. 212 ರನ್‌ಗಳ ಬಾರಿ ಮೊತ್ತದ ಗುರಿಯನ್ನು ರೋಚಕ ಹಣಾಹಣಿಯಲ್ಲಿ 20 ಓವರ್‌ಗಳಲ್ಲಿ ತಲುಪಿತು.

ಆರಂಭದಲ್ಲಿಯೇ ನಾಲ್ಕು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಲಖನೌಗೆ ನಿಕೋಲಸ್ ಪೂರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಆಪತ್ಬಾಂಧವರಂತೆ ಆಗಮಿಸಿ ಗೆಲುವಿನ ದಡ ಮುಟ್ಟಿಸಿದರು. ಕೇವಲ 19 ಚೆಂಡುಗಳಲ್ಲಿ ಭರ್ಜರಿ 7 ಸಿಕ್ಸರ್ ಹಾಗೂ 4 ಆಕರ್ಷಕ ಬೌಂಡರಿಗಳ ಮೂಲಕ 62 ರನ್‌ ಸಿಡಿಸಿದರು.

Advertisements

ಮಾರ್ಕಸ್ ಸ್ಟೊಯಿನಿಸ್ ಕೂಡ ತಾವೇನು ಕಡಿಮೆಯಿಲ್ಲದಂತೆ 30 ಎಸೆತಗಳಲ್ಲಿ 5 ಸಿಕ್ಸರ್,6 ಬೌಂಡರಿಗಳೊಂದಿಗೆ 62 ರನ್‌ ಸ್ಫೋಟಿಸಿದರು. ಆರ್‌ಸಿಬಿ ಪರ ಮೊಹಮದ್‌ ಸಿರಾಜ್ 22/3 ಹಾಗೂ ವೇಯ್ನ್ ಪಾರ್ನೆಲ್ 41/3 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ಗಳಾದರು.

ವ್ಯರ್ಥವಾದ ತ್ರಿಮೂರ್ತಿಗಳ ಆಟ

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ತಂಡವು ನಿಗದಿತ 20 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ ಬರೋಬ್ಬರಿ 212 ರನ್ ಗಳಿಸಿತು. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್​ ಡುಪ್ಲೇಸಿಸ್​ ಭರ್ಜರಿಯಾಗಿ ಆಟವಾಡಿದರು. ಬಳಿಕ ಬಂದ ಗ್ಲೇನ್​ ಮ್ಯಾಕ್ಸ್​ವೆಲ್​ ಸಹ ಅಬ್ಬರದ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿದರು.

ವಿರಾಟ್ ಕೊಹ್ಲಿ 44 ಎಸೆತದಲ್ಲಿ 4 ಸಿಕ್ಸ್ 4 ಬೌಂಡರಿ​ ಮೂಲಕ 61 ರನ್​ ಗಳಿಸಿದರೆ, ಫಾಫ್​ ಡುಪ್ಲೇಸಿಸ್​ 46 ಎಸೆತದಲ್ಲಿ 5 ಸಿಕ್ಸ್ ಮತ್ತು 5 ಬೌಂಡರಿ​ ಮೂಲಕ 79 ರನ್​ ಹಾಗೂ ಗ್ಲೇನ್ ಮ್ಯಾಕ್ಸ್​ವೆಲ್​ 29 ಎಸೆತದಲ್ಲಿ 6 ಸಿಕ್ಸ್ ಮತ್ತು 3 ಬೌಂಡರಿ​ ಮೂಲಕ 59 ರನ್ ಕೊನೆಯಲ್ಲಿ ದಿನೇಶ್​ ಕಾರ್ತಿಕ್​ 1 ರನ್​ ಗಳಿಸುವ ಮೂಲಕ ತಂಡದ ಮೊತ್ತ ಇನ್ನೂರು ರನ್​ ಗಡಿ ದಾಟಲು ಸಹಾಯಕರಾದರು.

 

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X