ಆರ್‌ಸಿಬಿ Vs ಚೆನ್ನೈ ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿದ್ದವ ಪೊಲೀಸ್ ಅತಿಥಿ!

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ‘ನಾಕೌಟ್’ ಪಂದ್ಯ ನಡೆಯಲಿದೆ. ಈ ಪಂದ್ಯದ ವೇಳೆಯಲ್ಲಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿ, ಪೊಲೀಸರಿಗೆ ಚಾಲೆಂಜ್ ಹಾಕಿದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ.

‘ಕ್ಲೌಟ್ ಚೇಸರ್ಸ್‌’ನ ಸಹ ಸಂಸ್ಥಾಪಕರಾಗಿರುವ ಬೆಂಗಳೂರಿನ ನಿತಿನ್ ಸಿಕ್ವೇರಾ ಎಂಬ ನೆಟ್ಟಿಗನೋರ್ವ, ” ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ಮೇ 18 ರಂದು ನಡೆಯಲಿರುವ ಐಪಿಎಲ್ ಪಂದ್ಯದ ಟಿಕೆಟ್ ನನಗೆ ಸಿಕ್ಕಿದೆ. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಾದ್ಯಂತ ಓಡುತ್ತೇನೆ” ಎಂದು ಪೊಲೀಸರಿಗೆ ಸವಾಲೆಸೆದಿದ್ದ. ಆತನ ಈ ಪೋಸ್ಟ್‌ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಆ ಬಳಿಕ ಅದು ಸುದ್ದಿಯಾಗಿತ್ತು.

ಈ ಪೋಸ್ಟ್‌ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಆತನ ವೈರಲ್ ಪೋಸ್ಟ್ ಆಧರಿಸಿ ಮುನ್ನೆಚ್ಚರಿಕೆ ವಹಿಸಿ, ಆತನನ್ನು ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ತಿಳಿದುಬಂದಿದೆ.

Advertisements

ಈ ಬಗ್ಗೆ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸರು, “ಒಳ್ಳೆಯ ಪ್ರಯತ್ನ, ಗೆಳೆಯ. ಆದರೆ ಐಪಿಎಲ್ ಪಂದ್ಯದ ಸಮಯದಲ್ಲಿ ಭದ್ರತೆಯನ್ನು ಉಲ್ಲಂಘಿಸಲು ಪ್ರಯತ್ನಿಸಿದರೆ ನೇರವಾಗಿ ಹೊಡೆಯುವ ಸಿಕ್ಸ್‌ ನಮ್ಮ ಕಸ್ಟಡಿಗೆ ಬರಲಿದೆ ಎಂಬುದು ಗ್ಯಾರಂಟಿ. ಕ್ಷಮಿಸು ಸಂಗಾತಿ, ನೀನು ಸ್ಟಂಪ್‌ ಆಗಿದ್ದೀಯಾ” ಎಂದು ಟ್ರೋಲ್‌ ಶೈಲಿಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಪೊಲೀಸರ 30 ಸೆಕೆಂಡ್‌ನ ವಿಡಿಯೋ ಪೋಸ್ಟ್‌ ಈಗ ವೈರಲ್ ಆಗಿದೆ.

ಯುವಕ ನಿತಿನ್ ಸಿಕ್ವೇರಾನನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮಕ್ಕೆ ಹಲವು ಮಂದಿ ಶ್ಲಾಘಿಸಿದ್ದು, “ಭದ್ರತೆಗೆ ಸವಾಲೆಸೆಯುವವರಿಗೆ ತಕ್ಕಪಾಠ ಕಲಿಸಿದ್ದೀರಿ” ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ. ಐಪಿಎಲ್ ಪಂದ್ಯ ಬಂದೋಬಸ್ತ್‌ಗೆ 1,200 ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಐಪಿಎಲ್ | ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್‌

ನಾಲ್ವರು ಡಿಸಿಪಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ ಒಟ್ಟು 1,200 ಪೊಲೀಸರನ್ನು ಕ್ರೀಡಾಂಗಣದ ಸುತ್ತಮುತ್ತ ನಿಯೋಜಿಸಲಾಗಿದೆ. 4 ಕೆಎಸ್‌ಆರ್‌ಪಿ ತುಕಡಿ, ಹೋಂ ಗಾರ್ಡ್ ಸಹ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X