ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

Date:

Advertisements

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 33ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ, ಮುಂಬೈ ಇಂಡಿಯನ್ಸ್‌ ವಿರುದ್ಧ 9 ರನ್‌ಗಳಿಂದ ಸೋಲಿಗೆ ಶರಣಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್‌ ಗಳಿಸಿ, ಪಂಜಾಬ್ ಕಿಂಗ್ಸ್ ತಂಡಕ್ಕೆ 193 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್, 19.1 ಓವರ್‌ಗಳಲ್ಲಿ 183 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ 9 ರನ್‌ಗಳಿಂದ ಸೋಲುವ ಮೂಲಕ ಮುಖಭಂಗ ಅನುಭವಿಸಿತು.

Advertisements

ಮುಂಬೈ ಇಂಡಿಯನ್ಸ್​ ನೀಡಿದ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಪಂಜಾಬ್​ ಕಿಂಗ್ಸ್​ ಮೊದಲ 4 ಓವರ್​ಗಳಲ್ಲೇ 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಕ್ರೀಸ್​ಗೆ ಬಂದ ಶಂಶಾಕ್​ ಸಿಂಗ್​​ ​​ಕೇವಲ 25 ಬಾಲ್​​ನಲ್ಲಿ 41 ರನ್​​ ಸಿಡಿಸಿದ್ದರು. ಇವರಿಗೆ ಸಾಥ್​ ನೀಡಿದ ಆಶುತೋಷ್​​ ​ಶರ್ಮಾ, ಕೇವಲ 28 ಬಾಲ್​ನಲ್ಲಿ 7 ಸಿಕ್ಸರ್​​, 2 ಬೌಂಡರಿ ಸಹಿತ 61 ರನ್​ ಚಚ್ಚಿದರು. ಹರ್​ಪ್ರೀತ್ ಬ್ರಾರ್ 17 ರನ್​ ಗಳಿಸಿದರೂ ಕೂಡ, ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ ಕೊನೆಯಲ್ಲಿ 9 ರನ್​ನಿಂದ ಸೋತರು.

ಮುಂಬೈ ಇಂಡಿಯನ್ಸ್​ ಪರ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ಕೊಯೆಟ್‌ಝೀ ತಲಾ ಮೂರು ವಿಕೆಟ್ ಗಳಿಸಿ ಮಿಂಚಿದರು. ಉಳಿದಂತೆ ಆಕಾಶ್ ಮಧ್ವಾಲ್, ಶ್ರೇಯಸ್ ಗೋಪಾಲ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯಾ ತಲಾ ಒಂದೊಂದು ವಿಕೆಟ್ ಗಳಿಸಿಕೊಂಡರು.

ಟಾಸ್​ ಸೋತರೂ ಮೊದಲು  ಬ್ಯಾಟಿಂಗ್​ ಮಾಡಿದ್ದ ಮುಂಬೈ ಇಂಡಿಯನ್ಸ್​ ಪರ ಸೂರ್ಯಕುಮಾರ್​ ಯಾದವ್​ ಭರ್ಜರಿ ಬ್ಯಾಟಿಂಗ್​ ಮಾಡಿದ್ದರು. ತಾನು ಆಡಿದ 53 ಬಾಲ್​ನಲ್ಲಿ 3 ಸಿಕ್ಸರ್​​, 7 ಬೌಂಡರಿ​ಯ ನೆರವಿನಿಂದ 78 ರನ್​ ಗಳಿಸಿ, ಮಿಂಚಿದರು. ಇವರಿಗೆ ಸಾಥ್​ ನೀಡಿದ ಮಾಜಿ ನಾಯಕ ರೋಹಿತ್​ ಶರ್ಮಾ 36, ತಿಲಕ್​ ವರ್ಮಾ 34, ಹಾರ್ದಿಕ್​ ಪಾಂಡ್ಯ 10, ಟೀಮ್​ ಡೇವಿಡ್​ 14 ರನ್​ ಗಳಿಸಿದರು. ಇವರೆಲ್ಲ ಬ್ಯಾಟಿಂಗ್‌ನ ನೆರವಿನಿಂದ ಮುಂಬೈ ಇಂಡಿಯನ್ಸ್​​ 192 ರನ್​​ ಗಳಿಸಿ, ಪಂಜಾಬ್‌ಗೆ ಸವಾಲಿನ ಗುರಿ ನೀಡಿತ್ತು.

ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಹರ್ಷಲ್ ಪಟೇಲ್ 4 ಓವರ್‌ಗಳಲ್ಲಿ 31 ರನ್ ನೀಡಿ 3 ವಿಕೆಟ್ ಕಬಳಿಸಿದರು. ಸ್ಯಾಮ್ ಕರನ್ 4 ಓವರ್‌ಗಳಲ್ಲಿ 41 ರನ್ ನೀಡಿ 2 ವಿಕೆಟ್ ಪಡೆದರೆ, ಕಗಿಸೊ ರಬಾಡ ಒಂದು ವಿಕೆಟ್ ಪಡೆದಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X