ಐಪಿಎಲ್ | ಸೋಲಿನಿಂದ ಆರಂಭಿಸಿ, ಸೋಲಿನಿಂದಲೇ ಅಭಿಯಾನ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್‌

Date:

Advertisements

ನೂತನ ನಾಯಕ ಹಾರ್ದಿಕ್ ಪಾಂಡ್ಯಾ ನೇತೃತ್ವದಲ್ಲಿ 2024ರ ಐಪಿಎಲ್‌ನ ಅಭಿಯಾನ ಆರಂಭಿಸಿದ್ದ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಸೋಲಿನಿಂದ ಅಭಿಯಾನ ಆರಂಭಿಸಿ, ಸೋಲಿನಿಂದಲೇ ಅಂತ್ಯಗೊಳಿಸಿದೆ.

ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಲೀಗ್‌ನ ತಮ್ಮ ಪಾಲಿನ ಕೊನೆಯ ಪಂದ್ಯದಲ್ಲಿ 18 ರನ್‌ಗಳಿಂದ ಸೋತಿದೆ. ಆ ಮೂಲಕ ಲೀಗ್‌ನಲ್ಲಿ ಒಟ್ಟು ಆಡಿದ 14 ಪಂದ್ಯದಲ್ಲಿ 10 ರಲ್ಲಿ ಸೋತಿದ್ದು, ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದೆ. ಅಲ್ಲದೇ, ಅಂಕಪಟ್ಟಿಯನ್ನು 10ನೇ ಹಾಗೂ ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಕಳೆದ ಮಾರ್ಚ್ 24ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್‌ ವಿರುದ್ಧ ಮೊದಲ ಪಂದ್ಯವನ್ನಾಡುವ ಮೂಲಕ ಮುಂಬೈ ಇಂಡಿಯನ್ಸ್‌, 2024ರ ಅಭಿಯಾನ ಆರಂಭಿಸಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌, 6 ರನ್‌ಗಳಿಂದ ಸೋಲು ಅನುಭವಿಸಿತ್ತು.

Advertisements

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಲಕ್ನೋ ತಂಡವು, ನಿಕೊಲಸ್ ಪೂರನ್ ಅವರ ಸ್ಫೋಟಕ ಅರ್ಧಶತಕದ(75, 29 ಎಸೆತ,8 ಸಿಕ್ಸರ್, 5 ಬೌಂಡರಿ) ಹಾಗೂ ನಾಯಕ ಕೆ ಎಲ್ ರಾಹುಲ್ ಅವರ ಅರ್ಧಶತಕ(55 ರನ್, 41 ಎಸೆತ)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 214 ರನ್ ಗಳಿಸಿತ್ತು.

ಈ ಗುರಿಯನ್ನು ಬೆನ್ನತ್ತಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 18 ರನ್‌ಗಳಿಂದ ಲಕ್ನೋ ವಿರುದ್ಧ ಸೋಲೊಪ್ಪಿಕೊಂಡಿತು.

ಮುಂಬೈ ಪರವಾಗಿ ಆರಂಭಿಕ ಆಟಗಾರ ರೋಹಿತ್ ಶರ್ಮಾ 68 ರನ್ ಹಾಗೂ ಕೊನೆಯಲ್ಲಿ ನಮನ್ ಧೀರ್ 62 ರನ್ ಗಳಿಸಿ, ಮಿಂಚಿದರು. ಲಕ್ನೋ ಪರ ಬೌಲಿಂಗ್‌ನಲ್ಲಿ ರವಿ ಬಿಷ್ಣೋಯ್ ಹಾಗೂ ನವೀನುಲ್ ಹಕ್ ಎರಡು ವಿಕೆಟ್ ಗಳಿಸಿದರೆ, ಕೃನಾಲ್ ಪಾಂಡ್ಯಾ ಹಾಗೂ ಮೊಹ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಗಳಿಸುವಲ್ಲಿ ಯಶಸ್ವಿಯಾದರು.

6ನೇ ಸ್ಥಾನದಲ್ಲಿ ಉಳಿದುಕೊಂಡ ಲಕ್ನೋ

ಪ್ಲೇ ಆಫ್‌ ರೇಸ್‌ನಲ್ಲಿದ್ದ ಲಕ್ನೋ ತಂಡವು, ಡೆಲ್ಲಿ ವಿರುದ್ಧದ ಕಳೆದ ಪಂದ್ಯದಲ್ಲಿ ಸೋತಿದ್ದರಿಂದ ಬಹುತೇಕ ಪ್ಲೇ ಆಫ್‌ ರೇಸ್‌ನಿಂದ ದೂರವಾಗಿತ್ತು. ಮುಂಬೈ ವಿರುದ್ಧದ ಕೊನೆಯ ಪಂದ್ಯದಲ್ಲಿ 18 ರನ್‌ಗಳಿಂದ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿ ಉಳಿದುಕೊಂಡಿದೆ. ಆ ಮೂಲಕ 14 ಪಂದ್ಯಗಳಲ್ಲಿ 7 ಗೆಲುವು, 7 ಸೋಲಿನೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X