ನಾಡಾದಿಂದ ಬಜರಂಗ್ ಪುನಿಯಾಗೆ ಮತ್ತೆ ಅಮಾನತು ಶಿಕ್ಷೆ

Date:

Advertisements

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ(ನಾಡಾ) ಒಲಿಂಪಿಕ್‌ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್‌ ಪುನಿಯಾ ಅವರಿಗೆ ಎರಡನೇ ಬಾರಿ ಅಮಾನತುಗೊಳಿಸಿದೆ. ಆರೋಪದ ಬಗ್ಗೆ ನೋಟಿಸ್ ನೀಡದ ಕಾರಣ ಉದ್ದೀಪನ ಮದ್ದು ತಡೆ ಶಿಸ್ತು ಸಮಿತಿ(ಎಡಿಡಿಪಿ) ಈ ಹಿಂದೆ ಪುನಿಯಾ ಅವರ ಅಮಾನತನ್ನು ಹಿಂಪಡೆದಿತ್ತು.

ಮಾರ್ಚ್‌ 10 ರಂದು ಸೋನಾಪೇಟೆಯಲ್ಲಿ ನಡೆದ ಒಲಿಂಪಿಕ್ಸ್‌ ಪೂರ್ವಭಾವಿ ಆಯ್ಕೆಯಲ್ಲಿ ಮೂತ್ರ ಮಾದರಿ ನೀಡದ ಕಾರಣ ನಾಡಾ ಏ.23 ರಂದು ಟೊಕೊಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್‌ ಪುನಿಯಾ ಅವರನ್ನು ಅಮಾನತುಗೊಳಿಸಲಾಗಿತ್ತು. ಅದೇ ರೀತಿ ವಿಶ್ವ ಕುಸ್ತಿ ಆಡಳಿತ ಮಂಡಳಿ ಕೂಡ ಅಮಾನತುನ್ನು ಊರ್ಜಿತಗೊಳಿಸಿತ್ತು.

ನಾಡಾ ತಮಗೆ ನೋಟಿಸ್ ನೀಡುವ ತನಕ ಅಮಾನತನ್ನು ತಡೆಹಿಡಿಯಬೇಕೆಂದು ಮೇ 31ರಂದು ನಾಡಾದ ಎಡಿಡಿಪಿ ಸಮಿತಿಗೆ ಪುನಿಯಾ ಮನವಿ ಮಾಡಿಕೊಂಡಿದ್ದರು. ನಾಡಾ ಇಂದು ನೋಟಿಸ್‌ ಜಾರಿಗೊಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

“2021ರ ರಾಷ್ಟ್ರೀಯ ಉದ್ದೀಪನ ಮದ್ದು ನಿಯಮಗಳ ವಿಧಿ 2.3ಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಿಮಗೆ ಔಪಚಾರಿಕ ನೋಟಿಸ್ ನೀಡಲಾಗುತ್ತಿದ್ದು, ನಿಮ್ಮನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುತ್ತಿದೆ” ಎಂದು ನಾಡಾ ನೋಟಿಸ್‌ನಲ್ಲಿ ತಿಳಿಸಿದೆ.

ವಿಚಾರಣೆಯನ್ನು ವಿನಂತಿಸಲು ಅಥವಾ ಆರೋಪವನ್ನು ಒಪ್ಪಿಕೊಳ್ಳಲು ಬಜರಂಗ್‌ ಅವರಿಗೆ ಜುಲೈ 11ರವರೆಗೂ ಸಮಯಾವಕಾಶ ನೀಡಲಾಗಿದೆ.

“ಉದ್ದೀಪನೆ ಪರೀಕ್ಷೆ ಉದ್ದೇಶಕ್ಕಾಗಿ ಅಗತ್ಯವಾದ ಮೂತ್ರ ಮಾದರಿಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಿದ್ದಾರೆ. ಅಧಿಕಾರಿಗಳು ಹಲವು ಮನವಿಗಳ ನಂತರವೂ ನೀವು ಮೂತ್ರ ಮಾದರಿಗಳನ್ನು ನೀಡಲು ನಿರಾಕರಿಸಿದ್ದೀರಿ. ಮೂತ್ರ ಮಾದರಿಗಾಗಿ ಅವಧಿ ಮೀರಿದ ಕಿಟ್‌ಗಳನ್ನು ನೀಡಲಾಗಿದೆ ಎಂಬ ನಿಮ್ಮ ಆರೋಪಗಳಿಗೂ ಸಂಬಂಧಿಸಿದ ಅಧಿಕಾರಿಗಳು ವಿವರವಾಗಿ ಉತ್ತರ ನೀಡಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ನಾಡಾ ಕ್ರಮ ಕೈಗೊಂಡಿದೆ” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X