‘ಪಾಕಿಸ್ತಾನ ಆಟಗಾರನ ವಿರುದ್ಧ ಗೆದ್ದದ್ದು ಹೇಗೆನಿಸಿತು’ ಎಂಬ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ನೀರಜ್ ಚೋಪ್ರಾ ತಾಯಿ

Date:

Advertisements
  • ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿರುವ ನೀರಜ್ ತಾಯಿ ಸರೋದ್ ದೇವಿಯವರ ವಿಡಿಯೋ
  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ಜಯಿಸುವ ಮೂಲಕ ಮೊತ್ತ ಮೊದಲ ಭಾರತೀಯ ಎಂಬ ದಾಖಲೆ ಬರೆದಿದ್ದರು.

ಪುರುಷರ ಜಾವೆಲಿನ್​ ಥ್ರೋ ಫೈನಲ್​ನಲ್ಲಿ 88.17 ಮೀಟರ್ ದೂರ ಭರ್ಜಿ ಎಸೆದು ಸ್ವರ್ಣ ಪದಕವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದ್ದರು.

ಈ ನಡುವೆ ಮಗನ ಸಾಧನೆಯ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಪತ್ರಕರ್ತನೋರ್ವ ಕೇಳಿದ್ದ ಪ್ರಶ್ನೆಗೆ ನೀರಜ್ ಚೋಪ್ರಾ ಅವರ ತಾಯಿ, ಸರೋಜ್ ದೇವಿ ನೀಡಿರುವ ಉತ್ತರವೊಂದು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು, ಸದ್ದು ಮಾಡುತ್ತಿದೆ.

Advertisements

ಪಾಕಿಸ್ತಾನದ ಅಥ್ಲೀಟ್ ಅರ್ಷದ್ ವಿರುದ್ಧ ತಮ್ಮ ಮಗನ ವಿಜಯದ ಬಗ್ಗೆ ತಾವೆಷ್ಟು ಭಾವುಕರಾಗಿದ್ದೀರಿ? ಎಂದು ಪತ್ರಕರ್ತ ಕೇಳಿದಾಗ, “ನೋಡಿ, ಎಲ್ಲರೂ ಮೈದಾನದಲ್ಲಿ ಆಡಲು ಬಂದಿದ್ದಾರೆ. ಆಟಗಾರ ಎಂದರೆ ಆತ ಆಟಗಾರನಷ್ಟೇ. ಒಬ್ಬರು ಅಥವಾ ಇನ್ನೊಬ್ಬರು ಖಂಡಿತವಾಗಿಯೂ ಗೆಲ್ಲುತ್ತಾರೆ. ಹಾಗಾಗಿ, ಅಲ್ಲಿ ಪಾಕಿಸ್ತಾನ ಅಥವಾ ಹರಿಯಾಣದವರು ಎಂಬ ಪ್ರಶ್ನೆಯೇ ಇಲ್ಲ. ನೀರಜ್ ಗೆದ್ದಿರುವುದು ಬಹಳ ಸಂತೋಷವಿದೆ. ಪಾಕಿಸ್ತಾನದ ಆಟಗಾರ(ಅರ್ಷದ್ ನದೀಮ್) ಗೆದ್ದಿದ್ದರೂ ಕೂಡ ಅಷ್ಟೇ ಸಂತೋಷ ಇರುತ್ತಿತ್ತು” ಎಂದು ಹೇಳಿದ್ದಾರೆ.

ಸದ್ಯ ಅವರ ಉತ್ತರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿದ್ದು, “ನೀರಜ್ ಚೋಪ್ರಾ ಚಿನ್ನ ಗೆದ್ದಿರುವುದು ಒಂದು ಸಾಧನೆಯಾದರೆ, ಅವರ ಕುಟುಂಬವೇ ಚಿನ್ನದಂತೆ ಇದೆ ನನಗೆ ಭಾಸವಾಗುತ್ತಿದೆ” ಎಂದು ರೋಶನ್ ರೈ ಎಂಬವರು ವಿಡಿಯೋ ಹಂಚಿಕೊಂಡು ಬರೆದುಕೊಂಡಿದ್ದಾರೆ.

‘ಗೋದಿ ಮೀಡಿಯಾದ ಪತ್ರಕರ್ತ, ನೀರಜ್ ತಾಯಿಯ ಬಾಯಿಂದ ಪಾಕಿಸ್ತಾನದ ಹೆಸರನ್ನು ಎತ್ತಿ ದ್ವೇಷ ಹರಡಲು ಕೈ ಹಾಕಿದ್ದಾನೆ. ಆದರೆ ಅವರು ಪ್ರೀತಿಯನ್ನು ಧಾರೆ ಎರೆದಿದ್ದಾರೆ. ಇದಕ್ಕಿಂತ ಸ್ಪಷ್ಟವಾದ ಉತ್ತರ ಇನ್ನೇನು ಬೇಕಿದೆ ಹೇಳಿ’ ಎಂದು ನೆಟ್ಟಿಗರೊಬ್ಬರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಇದು ಜಗತ್ತಿನ ಹಲವು ಆಟಗಾರರ ನಡುವೆ ನಡೆದ ಪೋಟಿಯೆಂದು ಆ ಸುದ್ದಿಗಾರನಿಗೆ ತಿಳಿದಿಲ್ಲವೇ ಎಂದು ಕೇಳಿ ಆತನನ್ನು ಬಯಲು ಮಾಡಬೇಕಿತ್ತು!

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X