ಚಾಂಪಿಯನ್ಸ್ ಟ್ರೋಫಿ | ‘ಸೋತ ಆಫ್ರಿಕಾ’: ಫೈನಲ್‌ಗೆ ನ್ಯೂಜಿಲ್ಯಾಂಡ್

Date:

Advertisements

ಪಾಕಿಸ್ತಾನದ ಲಾಹೋರ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಕೀವೀಸ್ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಪ್ರಶಸ್ತಿಗಾಗಿ ಟೀಮ್ ಇಂಡಿಯಾವನ್ನು ಮಾ.9ರಂದು ಎದುರಿಸಲಿದೆ.

ಮೊದಲು ಬ್ಯಾಟಿಂಗ್ ನಡೆಸಿದ್ದ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲ್ಯಾಂಡ್ ತಂಡವು ರಚಿನ್‌ ರವೀಂದ್ರ ಹಾಗೂ ಕೇನ್ ವಿಲಿಯಮ್ಸ‌ನ್ ಅವರ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 362 ರನ್ ಗಳಿಸಿತ್ತು.

363 ರನ್‌ಗಳ ಬೃಹತ್ ಮೊತ್ತವನ್ನು ತಲುಪಲು ಎಡವಿದ ತೆಂಬಾ ಬಾವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು, 50 ಓವರ್‌ಗಳಲ್ಲಿ 312 ರನ್‌ಗಳನ್ನು ಮಾಡಲಷ್ಟೇ ಶಕ್ತವಾಯಿತು. ಆ ಮೂಲಕ ‌50 ರನ್‌ಗಳಿಂದ ಸೋಲೊಪ್ಪಿಕೊಂಡಿದ್ದಲ್ಲದೇ, ಪ್ರಶಸ್ತಿಯ ಸುತ್ತನ್ನು ತಲುಪಲು ವಿಫಲವಾಯಿತು.

Advertisements

ದಕ್ಷಿಣ ಆಫ್ರಿಕಾ ಪರವಾಗಿ ಬ್ಯಾಟಿಂಗ್‌ನಲ್ಲಿ ಡೇವಿಡ್ ಮಿಲ್ಲರ್ ಶತಕ ಬಾರಿಸಿ(100 ರನ್) ಕೊನೆಯ ತನಕ ಹೋರಾಟ ನಡೆಸಿದರಾದರೂ, ಬೃಹತ್ ಗುರಿಯನ್ನು ತಲುಪಲು ಸಾಧ್ಯವಾಗಲಿಲ್ಲ. ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 312 ರನ್‌ ಗಳಿಸಿತು.

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯವು ದುಬೈಯ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಾ.9ರಂದು‌ ಟೀಮ್ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ರೋಹಿತ್ ಶರ್ಮಾ ಬಳಗವು ಸೋಲಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X