ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

Date:

Advertisements

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌ ಅವರ ಸಮಯೋಚಿತ ಆಟದ ನೆರವಿನೊಂದಿಗೆ ಲಖನೌ ಸೂಪರ್‌ ಜೈಂಟ್ಸ್‌ ತಂಡ 2024ನೇ ಐಪಿಎಲ್‌ ಆವೃತ್ತಿಯ 28ನೇ ಪಂದ್ಯದಲ್ಲಿ ಕೆಕೆಆರ್ ಗೆಲುವಿಗೆ 162 ರನ್‌ಗಳ ಸಾಧರಣ ಗುರಿ ನೀಡಿದೆ.

ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಕೆಕೆಆರ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡು ಲಖನೌ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಕೆಕೆಆರ್‌ ಬೌಲರ್‌ಗಳ ಎದುರು ಲಖನೌ ಬ್ಯಾಟ್ಸ್‌ಮನ್‌ಗಳು ರನ್‌ ಗಳಿಸಲು ಪರದಾಡಿದರು. ಆರಂಭಿಕ ಆಟಗಾರ ಕ್ವಿಂಟನ್‌ ಡಿಕಾಕ್‌ (10) ಹೆಚ್ಚು ಹೊತ್ತು ನಿಲ್ಲಲಿಲ್ಲ. ದೀಪಕ್‌ ಹೂಡ(8) ಕೂಡ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಔಟಾದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಬಿರುಸಿನ ಆಟವಾಡುವ ಮಾರ್ಕಸ್‌ ಸ್ಟೋನಿಸ್‌ 10 ರನ್‌ ಗಳಿಸಿ ವರುಣ್‌ ಚಕ್ರವರ್ತಿ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದರು.

ಕೊನೆಯಲ್ಲಿ 32 ಚೆಂಡುಗಳಲ್ಲಿ 4 ಸಿಕ್ಸರ್, 2 ಸಿಕ್ಸರ್‌ಗಳಿಂದಿಗೆ 45 ರನ್‌ಗಳ ಬಿರುಸಿನ ಆಟವಾಡಿದ ನಿಕಲೊಸ್‌ ಪೋರನ್‌, 39 ರನ್‌ ಗಳಿಸಿದ ನಾಯಕ ಕೆ ಎಲ್ ರಾಹುಲ್‌(27 ಎಸೆತ, 3 ಬೌಂಡರಿ, 2 ಸಿಕ್ಸರ್) ಹಾಗೂ 29 ರನ್‌ ಗಳಿಸಿದ ಆಯೂಶ್ ಬದೋನಿ ಅವರ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್‌ ಕಲೆ ಹಾಕಿತು.

ಕೆಕೆಆರ್‌ ಪರ ಮಿಷಲ್‌ ಸ್ಟಾರ್ಕ್ 28/3, ವೈಭವ್‌ ಅರೋರಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X