ಮೈದಾನದ ಮಣ್ಣು ಸವಿದ ಭಾವನಾತ್ಮಕ ಅನುಭವದ ಬಗ್ಗೆ ರೋಹಿತ್ ಶರ್ಮಾ ಮಾತು

Date:

Advertisements

ಟೀಂ ಇಂಡಿಯಾ 17 ವರ್ಷದ ನಂತರ ಟಿ20 ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ವಿಶ್ವಕಪ್‌ ಗೆಲುವಿನ ನಂತರ ಭಾರತದ ಆಟಗಾರರು ಕಣ್ಣೀರು, ಪರಸ್ಪರ ಆಲಿಂಗನ, ಆಕಾಶಕ್ಕೆ ಎಸೆಯುವಿಕೆ ಸೇರಿದ ಖುಷಿಯ ಕ್ಷಣಗಳನ್ನುಸೇರಿ ತಮ್ಮ ಭಾವನಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ನಾಯಕ ರೋಹಿತ್‌ ಶರ್ಮಾ ಭಾರತ ಗೆಲುವು ಸಾಧಿಸಿದ ನಂತರ ಬರ್ಬೊಡೊಸ್ ಮೈದಾನದ ಮಣ್ಣನ್ನು ಕೂಡ ಸವಿದರು. ಇವೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಯಿತು.

ಬಿಸಿಸಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರೋಹಿತ್ ಶರ್ಮಾ, “ಇದ್ಯಾವುದನ್ನು ಮೊದಲೇ ಅಂದುಕೊಂಡಿರಲಿಲ್ಲ. ನಾನು ಆ ಕ್ಷಣವನ್ನು ಅನುಭವಿಸುತ್ತಿದೆ. ನಮಗೆ ವಿಶ್ವಕಪ್‌ ಟ್ರೋಫಿ ನೀಡಿದ ಕಾರಣಕ್ಕಾಗಿ ಪಿಚ್‌ನ ಮಣ್ಣನ್ನು ಸವಿದೆ. ಈ ನಿರ್ದಿಷ್ಟ ಮೈದಾನ ಹಾಗೂ ಪಿಚ್‌ಅನ್ನು ನಾನು ನನ್ನ ಜೀವನದಲ್ಲಿ ಸದಾ ನೆನಪಿಸಿಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

“ಈ ಕ್ಷಣಗಳು ತುಂಬ ಮುಖ್ಯವಾಗಿತ್ತು. ಆದ ಕಾರಣ ನಾನು ಈ ಪಿಚ್‌ನ ಚೂರು ಮಣ್ಣನ್ನು ಸೇವಿಸಲು ಬಯಸಿದ್ದೆ. ನಮ್ಮೆಲ್ಲರ ಕನಸುಗಳು ನನಸಾಗುವ ಸ್ಥಳದಲ್ಲಿ ನಾನೇದರೂ ಮಾಡಲು ಬಯಸಿದ್ದೆ. ಹಾಗಾಗಿ ಮಣ್ಣು ಸೇವನೆಯ ಹಿಂದಿನ ಭಾವನೆ ಅದಾಗಿತ್ತು” ಎಂದು ರೋಹಿತ್‌ ಮಣ್ಣು ಸವಿದ ಕ್ಷಣದ ಬಗ್ಗೆ ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

“ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕನಸಿನಂತೆ ಭಾಸವಾಗುತ್ತಿದೆ. ವಿಶ್ವಕಪ್‌ ಗೆದ್ದರೂ ಸಹ ಗೆದ್ದಿಲ್ಲವೇ ಎಂದು ಅನಿಸುತ್ತಿದೆ. ರಾತ್ರಿಯಿಡೀ ನಾವು ಸಹ ಆಟಗಾರರೊಂದಿಗೆ ಸಂಭ್ರಮಿಸಿದೆವು. ನನಗೆ ನಿದ್ರಿಸಲು ಸಾಧ್ಯವಾಗಿರಲಿಲ್ಲ. ಆದರೂ ಪರವಾಗಿಲ್ಲ. ತವರಿಗೆ ಹೋಗಿ ನಿದ್ರಿಸಲು ಬೇಕಾದಷ್ಟು ಸಮಯವಿದೆ” ಎಂದು ಹೇಳಿದರು.

“ದೀರ್ಘ ಸಮಯದಿಂದ ಟ್ರೋಫಿ ಗೆಲ್ಲುವ ಬಗ್ಗೆ ಕನಸು ಕಂಡಿದ್ದೆವು. ಒಂದು ತಂಡವಾಗಿ ಅದಕ್ಕಾಗಿ ಕಠಿಣ ಪರಿಶ್ರಮ ವಹಿಸಿದ್ದೆವು. ತುಂಬಾ ಕಷ್ಟಪಟ್ಟು ಕೊನೆಗೆ ಟ್ರೋಫಿ ಗೆದ್ದಾಗ ತುಂಬಾ ಸಂತೋಷವಾಗುತ್ತಿದೆ. ನಾವೀಗ ನಿರಾಳಗೊಂಡಿದ್ದೇವೆ. ವಿಶ್ವಕಪ್‌ ಗೆಲುವಿನ ಹಿಂದೆ ತಂಡದ ಹಲವಾರು ವರ್ಷಗಳ ಪರಿಶ್ರಮವಿದೆ” ಎಂದು ಈ ಗೆಲುವು ಅತ್ಯಂತ ವಿಶೇಷ ಎಂದು ರೋಹಿತ್‌ ಶರ್ಮಾ ಬಣ್ಣಿಸಿದ್ದಾರೆ.

ಸರ್ಬಿಯಾದ ಟೆನಿಸ್‌ ಆಟಗಾರ ನೊವಾಕ್‌ ಜೊಕೊವಿಕ್ ಕೂಡ 2011ರ ವಿಂಬಲ್ಡನ್‌ ಫೈನಲ್‌ನಲ್ಲಿ ರಫೆಲ್ ನಡಾಲ್‌ ಅವರನ್ನು ಮಣಿಸಿದ ನಂತರ ಟೆನಿಸ್‌ ಮೈದಾನದಲ್ಲಿ ಹುಲ್ಲನ್ನು ಸವಿದಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X