ಏಕದಿನ ವಿಶ್ವಕಪ್ | ರೋಚಕ ಹಣಾಹಣಿಯಲ್ಲಿ 5 ರನ್‌ಗಳಿಂದ ಗೆದ್ದು ಬೀಗಿದ ಆಸ್ಟ್ರೇಲಿಯಾ

Date:

Advertisements

ಧರ್ಮಶಾಲಾದಲ್ಲಿ ಇಂದು ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ತಂಡ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎಸೆತದ ತನಕ ಹೋರಾಟ ನಡೆಸಿದರೂ, ಕೇವಲ 5 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಗೆಲ್ಲಲು 389 ರನ್‌ಗಳ ಬೃಹತ್ ಗುರಿ ಪಡೆದಿದ್ದ ಕೀವೀಸ್, 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 383 ರನ್‌ ಗಳಿಸಿ, ಕೇವಲ 5 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸೀಸ್, ನಿಗದಿತ 49.2 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 388 ರನ್ ದಾಖಲಿಸಿತ್ತು.

Advertisements

ನ್ಯೂಝಿಲ್ಯಾಂಡ್ ಪರ ಇನ್ನಿಂಗ್ಸ್ ಆರಂಭಿಸಿದ್ದ ಡೆವೊನ್ ಕಾನ್ವೆ ಹಾಗೂ ವಿಲ್ ಯಂಗ್ ಮೊದಲ ವಿಕೆಟ್‌ಗೆ 61 ರನ್‌ಗಳ ಜೊತೆಯಾಟ ನಡೆಸಿ, ಉತ್ತಮ ಆರಂಭ ಒದಗಿಸಿದ್ದರು.

ಬಳಿಕ ಕ್ರೀಸ್‌ಗೆ ಆಗಮಿಸಿದ ರಚಿನ್ ರವೀಂದ್ರ ತಾಳ್ಮೆಯ ಆಟವಾಡಿ ಇನ್ನಿಂಗ್ಸ್ ಕಟ್ಟಿದರು. 89 ಎಸೆತಗಳನ್ನು ಎದುರಿಸಿ, 9 ಬೌಂಡರಿ ಹಾಗೂ 5 ಸಿಕ್ಸ್‌ನ ನೆರವಿನಿಂದ 116 ರನ್ ಗಳಿಸಿ, ಔಟಾದರು.

ಕೊನೆಯಲ್ಲಿ ನ್ಯೂಝಿಲ್ಯಾಂಡ್ ಪರವಾಗಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಜಿಮ್ಮಿ ನೀಶಮ್, 39 ಎಸೆತಗಳಲ್ಲಿ 58 ರನ್ ಗಳಿಸಿ, ರನೌಟಾದರು.

ಕೊನೆಯ ಎರಡು ಎಸೆತಗಳಲ್ಲಿ ಗೆಲುವಿಗೆ 7 ರನ್ ಬೇಕಿದ್ದಾಗ, ಸ್ಟ್ರೈಕ್ ಕಾಯ್ದುಕೊಳ್ಳಲು ಜಿಮ್ಮಿ ನೀಶಮ್ ಯತ್ನಿಸಿದರು. ಬೌಂಡರಿ ಗೆರೆಯಿಂದ ಲ್ಯಾಬೂಶೈನ್ ಎಸೆದ ಥ್ರೋವನ್ನು ಆಸೀಸ್ ವಿಕೆಟ್ ಕೀಪರ್ ಇಂಗ್ಲಿಸ್ ಹಾರಿಕೊಂಡು ರನೌಟ್ ಮಾಡಿದ್ದರಿಂದ, ನ್ಯೂಝಿಲ್ಯಾಂಡ್ ಗೆಲುವಿನ ಆಸೆ ಕಮರಿತು. ಕೊನೆಯಲ್ಲಿ ನ್ಯೂಝಿಲ್ಯಾಂಡ್ 5 ರನ್‌ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಆಸೀಸ್ ಪರ ಬೌಲಿಂಗ್‌ನಲ್ಲಿ ಆಡಂ ಝಾಂಪಾ 74ಕ್ಕೆ 3, ಜೋಶ್ ಹ್ಯಾಝಲ್‌ವುಡ್ 70ಕ್ಕೆ 2, ಕಮ್ಮಿನ್ಸ್‌ 66ಕ್ಕೆ 2 ಹಾಗೂ ಮ್ಯಾಕ್ಸ್‌ವೆಲ್ 62ಕ್ಕೆ 1 ವಿಕೆಟ್ ಪಡೆದುಕೊಂಡರು. ಧರ್ಮಶಾಲಾದ ಮೈದಾನದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ನಿಂದಾಗಿ 771 ರನ್‌ಗಳು ದಾಖಲಾಗುವ ಮೂಲಕ, ರನ್‌ಗಳ ಹೊಳೆಯೇ ಹರಿಯಿತು.

ಆಸ್ಟ್ರೇಲಿಯಾ ಪರ ವಿಶ್ವಕಪ್‌ನ ಮೊದಲ ಪಂದ್ಯವನ್ನಾಡಿದ್ದ ಟ್ರಾವಿಸ್ ಹೆಡ್, ಶತಕ ಬಾರಿಸುವ ಮೂಲಕ ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. 67 ಎಸೆತಗಳನ್ನು ಎದುರಿಸಿದ ಹೆಡ್ 10 ಬೌಂಡರಿಗಳು ಮತ್ತು 7 ಸಿಕ್ಸರ್‌ಗಳೊಂದಿಗೆ 109 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X