ಪ್ಯಾರಿಸ್ ಡೈಮಂಡ್ ಲೀಗ್‌ನಿಂದ ಹೊರಗುಳಿದ ಒಲಿಂಪಿಕ್ಸ್‌ ಚಾಂಪಿಯನ್ ನೀರಜ್ ಚೋಪ್ರಾ 

Date:

Advertisements

ಒಲಿಂಪಿಕ್ಸ್‌ ಮತ್ತು ವರ್ಲ್ಡ್‌ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಜುಲೈ 7ರಂದು ನಡೆಯಲಿರುವ ಪ್ಯಾರಿಸ್ ಡೈಮಂಡ್ ಲೀಗ್‌ನಿಂದ ಹೊರಗುಳಿಯಲಿದ್ದಾರೆ. ಪ್ಯಾರಿಸ್ ಡೈಮಂಡ್ ಲೀಗ್‌ನ ವೆಬ್‌ಸೈಟ್‌ನಲ್ಲಿ ‘ಐದು ಒಲಿಂಪಿಕ್ ಚಾಂಪಿಯನ್‌ಗಳು, ಆರು ವರ್ಲ್ಡ್‌ ಚಾಂಪಿಯನ್‌ಗಳು ಮತ್ತು ಚಾರ್ಲೆಟಿಯಲ್ಲಿ ಹನ್ನೆರಡು ಯುರೋಪಿಯನ್ ಚಾಂಪಿಯನ್‌ಗಳು’ ಎಂಬ ಶೀರ್ಷಿಕೆಯಡಿ ಪ್ರಕಟಿಸಿರುವ ಪಟ್ಟಿಯಲ್ಲಿ ನೀರಜ್ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಪ್ರಕಟಣೆಯಲ್ಲಿ ಐದು ಟೋಕಿಯೊ ಒಲಿಂಪಿಕ್ಸ್ ಚಾಂಪಿಯನ್‌ಗಳನ್ನು ಹೆಸರಿಸಲಾಗಿದೆ; ಫೇಯ್ತ್ ಕಿಪ್ಯೆಗೊನ್, ಮೊಂಡೋ ಡುಪ್ಲಾಂಟಿಸ್ (ಪೋಲ್ ವಾಲ್ಟ್), ಮಲೈಕಾ ಮಿಹಾಂಬೊ (ಲಾಂಗ್ ಜಂಪ್), ವ್ಯಾಲರಿ ಅಲ್ಮನ್ (ಡಿಸ್ಕಸ್), ಮತ್ತು ವೊಜ್ಸಿಕ್ ನೋವಿಕಿ (ಹ್ಯಾಮರ್ ಥ್ರೋ) – ಈ ಐವರು ಡೈಮಂಡ್ ಲೀಗ್‌ನಲ್ಲಿ ಭಾಗವಹಿಸಲಿದ್ದಾರೆ. ನೀರಜ್ ಅವರು ಲೀಗ್‌ನಿಂದ ಹೊರಗುಳಿದಿದ್ದಾರೆ.

‘ಓಸ್ಟ್ರಾವಾ ಗೋಲ್ಡನ್ ಸ್ಪೈಕ್ ಮೀಟ್’ನಲ್ಲಿ ಪದಕ ಗೆಲ್ಲುವ ಅವಕಾಶ ಕಳೆದುಕೊಂಡ ನೀರಜ್, ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಸ್ಪರ್ಧಿಸಿದ್ದರು. ಇನ್ನು, ಅವರ ಮುಂದಿನ ದೊಡ್ಡ ಸ್ಪರ್ಧೆ ಜುಲೈನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಆಗಿರಲಿದೆ.

Advertisements

ಮೇ ತಿಂಗಳಲ್ಲಿ ಭುವನೇಶ್ವರದಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ಭಾಗವಹಿಸುವುದಾಗಿ ನೀಜರ್ ಖಚಿತಪಡಿಸಿದ್ದರು. ತರಬೇತಿ ಸಮಯದಲ್ಲಿ ಅವರ ತೊಡೆ ಭಾಗದಲ್ಲಿ ನೋವು ಕಾಣಿಸಿಕೊಂಡ ಕಾರಣ ಅವರು ಓಸ್ಟ್ರಾವಾ ಕ್ರೀಡಾಕೂಟದಲ್ಲಿ ಭಾಗವಹಿಸಲಿಲ್ಲ.

ಸದ್ಯ, ಜುಲೈ 26ರಿಂದ ಫ್ಯಾರಿಸ್‌ನಲ್ಲಿಯೇ ನಡೆಯಲಿರುವ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ನೀರಜ್ ಸಿದ್ದತೆ ನಡೆಸುತ್ತಿದ್ದಾರೆ. ಅದಕ್ಕೂ ಮುನ್ನ ಯಾವುದೇ ಸಮಸ್ಯೆಯನ್ನು ಎದುರಿಸಲು ಸಿದ್ದರಿಲ್ಲವೆಂದು ಹೇಳಲಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X