ಏಕದಿನ ವಿಶ್ವಕಪ್ | ಪಾಕಿಸ್ತಾನವನ್ನು ಕಾಪಾಡಿದ ಫಖರ್ ಝಮಾನ್: ಸೆಮಿಫೈನಲ್ ಆಸೆ ಜೀವಂತ

Date:

Advertisements

ಬಹಳ ಕುತೂಹಲ ಮೂಡಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವಿನ ವಿಶ್ವಕಪ್ ಪಂದ್ಯದಲ್ಲಿ, ಡಕ್ ವರ್ಥ್‌ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನವು 21 ರನ್‌ಗಳಿಂದ ಜಯಗಳಿಸಿದೆ.

ಗೆಲ್ಲಲು 402 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ್ದ ಪಾಕಿಸ್ತಾನಕ್ಕೆ ಆರಂಭಿಕ ಆಟಗಾರ ಶಫೀಕ್ ಅವರು 6 ರನ್ ಇರುವಾಗಲೇ ಔಟಾಗಿದ್ದರಿಂದ ಆರಂಭಿಕ ಆಘಾತಕ್ಕೊಳಗಾಗಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಫಖರ್ ಝಮಾನ್‌ಗೆ ಜೊತೆಯಾದ ನಾಯಕ ಬಾಬರ್ ಆಝಂ ತಾಳ್ಮೆಯ ಆಟವಾಡಿದರೆ, ಫಖರ್ ಝಮಾನ್‌ ನ್ಯೂಝಿಲ್ಯಾಂಡ್ ಬೌಲರ್‌ಗಳನ್ನು ಯದ್ವಾತದ್ವಾ ಚಚ್ಚಿದರು.

ಮೊದಲು ಮಳೆ ಬಂದಾಗ, 21 ಓವರ್‌ಗಳಾಗಿತ್ತು. ಈ ವೇಳೆ ಪಾಕಿಸ್ತಾನ ಒಂದು ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತ್ತು. ಮಳೆ ಬಿಡುವು ನೀಡಿದಾಗ ಪಾಕಿಸ್ತಾನಕ್ಕೆ 41 ಓವರ್‌ಗಳಲ್ಲಿ 342 ರನ್‌ ಗಳಿಸಬೇಕಿತ್ತು.

Advertisements

ಈ ನಡುವೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಫಖರ್ ಝಮಾನ್ ಭರ್ಜರಿ ಎರಡು ಸಿಕ್ಸ್‌ಗಳ ಮೂಲಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದ 25.3 ಓವರ್‌ಗಳಲ್ಲಿ 200 ರನ್ ಗಳಿಸಿತು. ಮಳೆಯ ಕಾರಣ ಡಕ್ ವರ್ಥ್‌ ಲೂಯಿಸ್ ನಿಯಮ ಅನ್ವಯಿಸುವಾಗ ಪಾಕಿಸ್ತಾನ 21 ರನ್‌ಗಳ ಮುನ್ನಡೆ ಸಾಧಿಸಿತ್ತು.

ಮತ್ತೆ ಮಳೆ ಬಂದ ಹಿನ್ನೆಲೆಯಲ್ಲಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ 21 ರನ್‌ಗಳ ಜಯಗಳಿಸಿದೆ. ಈ ಗೆಲುವಿನ ಮೂಲಕ ಪಾಕಿಸ್ತಾನವು ಸೆಮಿಫೈನಲ್ ಆಸೆಯನ್ನು ಇನ್ನೂ ಜೀವಂತವಾಗಿರಿಸಿದೆ.

ಕೇವಲ 81 ಎಸೆತದಲ್ಲಿ ಔಟಾಗದೆ 8 ಬೌಂಡರಿ ಹಾಗೂ 11 ಸಿಕ್ಸ್‌ನ ನೆರವಿನಿಂದ 126 ರನ್ ಚಚ್ಚಿದ ಫಖರ್ ಝಮಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಬಾಬರ್ ಅಝಮ್ ಕೂಡ ಅತ್ತ್ಯುತ್ತಮ ಆಟವಾಡಿ 63 ಎಸೆತಕ್ಕೆ 66 ರನ್ ಹೊಡೆದರು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ್ದ ನ್ಯೂಝಿಲ್ಯಾಂಡ್‌ ಪಾಕಿಸ್ತಾನಕ್ಕೆ 402 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ಇಷ್ಟು ದೊಡ್ಡ ಗುರಿ ನೀಡಿದರೂ, ಮಳೆ ಬಂದ ಹಿನ್ನೆಲೆಯಲ್ಲಿ ಡಕ್ ವರ್ಥ್‌ ಲೂಯಿಸ್ ನಿಯಮ ಅನ್ವಯಿಸಿದ್ದರಿಂದ ಸೋಲನುಭವಿಸಿದ್ದು, ನಿರಾಸೆಗೊಳಗಾದರು. ಈ ಸೋಲಿನ ಮೂಲಕ ನ್ಯೂಝಿಲ್ಯಾಂಡ್‌ ಕಳೆದ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿದಂತಾಗಿದೆ. ಆದರೂ ಸೆಮಿಫೈನಲ್‌ಗೇರುವ ಅವಕಾಶ ಇನ್ನೂ ಕಾಯ್ದುಕೊಂಡಿದೆ.

ಈವರೆಗಿನ ಅಂಕಪಟ್ಟಿಯಲ್ಲಿ ನ್ಯೂಝಿಲ್ಯಾಂಡ್‌ 4ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನವು 5ನೇ ನೇ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X