ಅಫ್ಘಾನ್ ವಿರುದ್ಧ ಏಕದಿನ ಪಂದ್ಯ | ಶ್ರೀಲಂಕಾ ಪರ ಮೊದಲ ದ್ವಿಶತಕ ದಾಖಲಿಸಿದ ಪಾತುಮ್ ನಿಸ್ಸಾಂಕ

Date:

Advertisements

ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಲಂಕಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪಾತುಮ್ ನಿಸ್ಸಾಂಕ ದ್ವಿಶತಕ ಬಾರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಬ್ಯಾಟ್ಸ್‌ಮನ್ ಪಾತುಮ್ ನಿಸ್ಸಾಂಕ ಅಜೇಯ 210 ರನ್‌ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದು ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿದ್ದಾರೆ. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಶ್ರೀಲಂಕಾ ಪರ ಮೊದಲ ದ್ವಿಶತಕ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 50 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು ಬರೋಬ್ಬರಿ 381 ರನ್ ಕಲೆಹಾಕಿದೆ. ತಂಡದ ಪರ ಕೇವಲ 139 ಎಸೆತಗಳನ್ನು ಎದುರಿಸಿದ ನಿಸ್ಸಾಂಕ 20 ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಿತ ಅಜೇಯ ದ್ವಿಶತಕದ ಇನ್ನಿಂಗ್ಸ್ ಆಡಿದರು.

Advertisements

ಜಯಸೂರ್ಯ ದಾಖಲೆ ಪತನ
ಇಂದಿನ ಪಂದ್ಯದಲ್ಲಿ ಅಜೇಯ 210 ರನ್​ಗಳ ಇನ್ನಿಂಗ್ಸ್ ಆಡಿದ ನಿಸ್ಸಾಂಕ, ಈ ದ್ವಿಶತಕದ ಇನ್ನಿಂಗ್ಸ್ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲಿ ಲಂಕಾ ತಂಡದ ಮಾಜಿ ಆಟಗಾರ ಸನತ್ ಜಯಸೂರ್ಯ ಅವರ 24 ವರ್ಷಗಳ ಹಳೆಯ ದಾಖಲೆಯೂ ಸೇರಿದೆ.

ನಿಸ್ಸಾಂಕಗೂ ಮೊದಲು ಸನತ್ ಜಯಸೂರ್ಯ ಸಿಡಿಸಿದ್ದ 189 ರನ್‌ಗಳು ಏಕದಿನದಲ್ಲಿ ಶ್ರೀಲಂಕಾದ ಯಾವುದೇ ಬ್ಯಾಟ್ಸ್‌ಮನ್‌ ಕಲೆಹಾಕಿದ್ದ ಅತ್ಯುತ್ತಮ ಸ್ಕೋರ್ ಆಗಿತ್ತು. ಇದೀಗ ಆ ದಾಖಲೆಯನ್ನು ನಿಸ್ಸಾಂಕ ಮುರಿದಿದ್ದಾರೆ.

2000ರಲ್ಲಿ ನಡೆದ ಭಾರತದ ವಿರುದ್ಧದ ಏಕದಿನ ಪಂದ್ಯದಲ್ಲಿ ಲಂಕಾ ತಂಡದ ಮಾಜಿ ಆಟಗಾರ ಜಯಸೂರ್ಯ 189 ರನ್‌ಗಳ ಇನಿಂಗ್ಸ್‌ ಆಡಿದ್ದರು. 24 ವರ್ಷಗಳ ನಂತರ ಅಫ್ಘಾನಿಸ್ತಾನ ವಿರುದ್ಧ 210 ರನ್ ಬಾರಿಸುವ ಮೂಲಕ ನಿಸ್ಸಾಂಕ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. ನಿಸ್ಸಾಂಕ ದಾಖಲೆಗೆ ಮೈದಾನದಲ್ಲಿ ಸನತ್ ಜಯಸೂರ್ಯ ಕೂಡ ಸಾಕ್ಷಿಯಾದರು.

ಏಕದಿನದಲ್ಲಿ ದ್ವಿಶತಕ ಸಿಡಿಸಿದ 10ನೇ ಬ್ಯಾಟ್ಸ್‌ಮನ್ ನಿಸ್ಸಾಂಕ
ಪಾತುಮ್ ನಿಸ್ಸಾಂಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ 10ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಭಾರತದ ರೋಹಿತ್ ಶರ್ಮಾ, ಇಶಾನ್ ಕಿಶನ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ಶುಭ್​ಮನ್ ಗಿಲ್ ಈ ಸಾಧನೆ ಮಾಡಿದ್ದರು. ಇವರಲ್ಲದೇ ಕ್ರಿಸ್ ಗೇಲ್, ಮಾರ್ಟಿನ್ ಗಪ್ಟಿಲ್, ಗ್ಲೆನ್ ಮ್ಯಾಕ್ಸ್​ವೆಲ್, ಫಖರ್ ಜಮಾನ್ ಕೂಡ ಏಕದಿನದಲ್ಲಿ ದ್ವಿಶತಕ ಸಿಡಿಸಿದ್ದರು.

ರೋಹಿತ್ ಶರ್ಮಾ ಒಬ್ಬರೇ ಏಕದಿನ ಕ್ರಿಕೆಟ್‌ನಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ್ದು, ಈ ಸಾಧನೆ ಮಾಡಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಬಿಟ್ಟರೆ ಏಕದಿನ ಕ್ರಿಕೆಟ್‌ನಲ್ಲಿ ಯಾರೂ ಒಂದಕ್ಕಿಂತ ಹೆಚ್ಚು ದ್ವಿಶತಕ ಸಿಡಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X