ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

Date:

Advertisements

ʻನನ್ನ ಕುರಿತು ಹೊರಗಡೆ ಯಾರು ಏನು ಮಾತನಾಡುತ್ತಾರೆ ಎಂಬುದರ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲʼ ಎಂದು ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ್ದ ಕೊಹ್ಲಿ, ಆರ್‌ಸಿಬಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಆ ಮೂಲಕ  ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿ ಅತಿಹೆಚ್ಚು ಶತಕದ ದಾಖಲೆ (6), ಹೊಂದಿದ್ದ ಕ್ರಿಸ್ ಗೇಲ್ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದರು.

ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯಿಸಿದ ಕೊಹ್ಲಿ, ʻನಾನು ಎಂದಿಗೂ ಹಿಂದಿನ ಅಂಕಿ-ಅಂಶಗಳನ್ನು ಗಮನಿಸುವುದಿಲ್ಲ. ನಾನು ಈಗಾಗಲೇ ತುಂಬಾ ಒತ್ತಡಕ್ಕೆ ಒಳಗಾಗಿದ್ದೇನೆ. ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರೂ ಸಹ ಕೆಲವೊಮ್ಮೆ ನನಗೆ ಸಲ್ಲಬೇಕಾದ ಗೌರವ ನೀಡುವುದಿಲ್ಲ. ಹೀಗಾಗಿ  ಹೊರಗೆ ಯಾರಾದರೂ ಏನಾದರೂ ಮಾತನಾಡಿಕೊಳ್ಳುತ್ತಾರೆ ಎಂಬುದಕ್ಕೆ ನಾನು ಹೆದರುವುದಿಲ್ಲ. ಅದು ಅವರವರ ಅಭಿಪ್ರಾಯವಾಗಿದೆʼ ಕಿಂಗ್‌ ಕೊಹ್ಲಿ ಮಾರ್ಮಿಕವಾಗಿ ನುಡಿದಿದ್ದಾರೆ.

Advertisements

ಗುರುವಾರ ಹೈದರಾಬಾದ್‌ನ ರಾಜೀವ್‌ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಹೈದರಬಾದ್‌, ಹೆನ್ರಿಕ್ ಕ್ಲಾಸೆನ್ ಅಬ್ಬರದ ಶತಕದ ಬಲದಲ್ಲಿ 5 ವಿಕೆಟ್‌ ನಷ್ಟದಲ್ಲಿ 186 ರನ್‌ಗಳಿಸಿತ್ತು. 51 ಎಸೆತಗಳನ್ನು ಎದುರಿಸಿದ ಕ್ಲಾಸೆನ್‌ 6 ಸಿಕ್ಸರ್‌ ಮತ್ತು 8 ಬೌಂಡರಿಗಳ ನೆರವಿನಿಂದ 104 ರನ್‌ಗಳಿಸಿದ್ದರು.

ದಾಖಲೆ ಸರಿಗಟ್ಟಿದ ಕೊಹ್ಲಿ!

187 ರನ್‌ ಚೇಸಿಂಗ್‌ ವೇಳೆ ʻಕಿಂಗ್ ಕೊಹ್ಲಿʼ ದಾಖಲಿಸಿದ ಅಮೋಘ ಶತಕ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಅವರ ʻಕ್ಲಾಸಿಕ್‌ ಫಿಫ್ಟಿʼ ನೆರವಿನಿಂದ ಆರ್‌ಸಿಬಿ, ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತ್ತು.

ಕೊಹ್ಲಿ 63 ಎಸೆತಗಳಲ್ಲಿ  ಭರ್ತಿ 100 ರನ್ ಗಳಿಸಿದರೆ, ನಾಯಕ ಫಾಫ್ ಡು ಪ್ಲೆಸಿಸ್ 47 ಎಸೆತಗಳಲ್ಲಿ 71 ರನ್ ಗಳಿಸಿದರು. 108 ಎಸೆತಗಳಲ್ಲಿ 172 ರನ್‌ಗಳ ಜೊತೆಯಾದಲ್ಲಿ ಭಾಗಿಯಾದ ಈ ಜೋಡಿ ತಂಡವನ್ನು ಸುಲಭ ಗೆಲುವಿನತ್ತ ಮುನ್ನಡೆಸಿದರು. ಆ ಮೂಲಕ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X