ಭಾರತ – ದ.ಆಫ್ರಿಕಾ ಟೆಸ್ಟ್ : ಕಗಿಸೊ ರಬಾಡ ದಾಳಿಗೆ ಕುಸಿದ ಭಾರತ

Date:

Advertisements

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ್ದು, ಮೊದಲ ಇನಿಂಗ್ಸ್‌ನಲ್ಲಿ 59 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ರನ್‌ ಗಳಿಸಿದೆ.  ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ 59 ಓವರ್‌ಗಳಿಗೆ ದಿನದಾಟವನ್ನು ನಿಲ್ಲಿಸಲಾಗಿದೆ.

ದಕ್ಷಿಣ ಆಫ್ರಿಕಾದ ಸಂಚೂರಿಯನ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ನಾಯಕ ತೆಂಬಾ ಬವುಮಾ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

12 ಓವರ್‌ಗಳಾಗುವಷ್ಟರಲ್ಲಿಯೇ ಟೀಂ ಇಂಡಿಯಾ ಯಶಸ್ವಿ ಜೈಸ್ವಾಲ್(17), ನಾಯಕ ರೋಹಿತ್ ಶರ್ಮಾ(5), ಶುಭಮನ್‌ ಗಿಲ್(2) ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ನಾಲ್ಕನೇ ವಿಕೆಟ್ ಜೊತೆಯಾಟಕ್ಕೆ ವಿರಾಟ್‌ ಕೊಹ್ಲಿ(38) ಹಾಗೂ ಶ್ರೇಯಸ್‌ ಅಯ್ಯರ್(31) 68 ರನ್‌ ಕಲೆ ಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ನಂತರದಲ್ಲಿ ಬಂದ ರವಿಚಂದ್ರನ್ ಅಶ್ವಿನ್(8) ಹೆಚ್ಚು ಹೊತ್ತು ನಿಲ್ಲಲಿಲ್ಲ. ಶಾರ್ದೂಲ್ ಠಾಕೂರ್ 24 ರನ್‌ ಗಳಿಸಿ ಔಟಾದರೆ, ಬುಮ್ರಾ 1 ರನ್ನಿಗೆ ಪೆವಿಲಿಯನ್‌ಗೆ ತೆರಳಿದರು.

ಅರ್ಧ ಶತಕ ಗಳಿಸಿ ಅಜೇಯರಾಗಿ ಉಳಿದಿರುವ ವಿಕೆಟ್ ಕೀಪರ್ ಕೆ ಎಲ್ ರಾಹುಲ್ 70 ರನ್‌ ಗಳಿಸಿ ಆಡುತ್ತಿದ್ದಾರೆ. ರಾಹುಲ್‌ಗೆ ಜೊತೆಯಾಗಿರುವ ಮೊಹಮದ್‌ ಸಿರಾಜ್‌ ಇನ್ನು ಖಾತೆಯನ್ನು ತೆರದಿಲ್ಲ.

ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 17 ಓವರ್‌ಗಳಲ್ಲಿ 44/5, ನಾಂದ್ರೆ ಬರ್ಗರ್ 50/2 ಹಾಗೂ ಮಾರ್ಕೊ ಜಾನ್ಸೆನ್ 52/1 ವಿಕೆಟ್ ಕಬಳಿಸಿ ಭಾರತದ ಪತನಕ್ಕೆ ಕಾರಣವಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X