ಐಪಿಎಲ್ 2023 | ಸಿರಾಜ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್

Date:

Advertisements

ಮುಹಮ್ಮದ್ ಸಿರಾಜ್ ಬೌಲಿಂಗ್-ಫೀಲ್ಡಿಂಗ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್ ತವರಿನಲ್ಲೇ ಹೀನಾಯ ಸೋಲು ಅನುಭವಿಸಿದೆ‌.

ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ 3ನೇ ಗೆಲುವು ಸಾಧಿಸಿದೆ. ಮೊಹಾಲಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ಆತಿಥೇಯ ಪಂಜಾಬ್ ವಿರುದ್ಧ 24 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ‌.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಆರಂಭಿಕರಾದ ವಿರಾಟ್ ಕೊಹ್ಲಿ [59] ಮತ್ತು ಫಾಫ್ ಡುಪ್ಲೆಸಿಸ್ [84] ಗಳಿಸಿದ ಅಬ್ಬರದ ಅರ್ಧಶತಕಗಳ ನೆರವಿನಿಂದ 4 ವಿಕೆಟ್ ನಷ್ಟದಲ್ಲಿ 174 ರನ್‌ಗಳಿಸಿತ್ತು.

Advertisements

ಉತ್ತರವಾಗಿ ಬ್ಯಾಟಿಂಗ್ ನಲ್ಲಿ ಪಂಜಾಬ್ 18.2 ಓವರ್‌ಗಳಲ್ಲಿ 150 ರನ್‌ ಗಳಿಸುವಷ್ಟರಲ್ಲಿ ಸರ್ವಪತನ ಕಂಡಿತು.

4 ಓವರ್‌ಗಳ ದಾಳಿಯಲ್ಲಿ 21 ರನ್ ನೀಡಿ 4 ವಿಕೆಟ್ ಪಡೆದ ವೇಗಿ ಮುಹಮ್ಮದ್ ಸಿರಾಜ್ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಪಾಯಕಾರಿ ಆಗುವ ಸೂಚನೆ ನೀಡಿದ್ದ ಹರ್ಪ್ರೀತ್ ಸಿಂಗ್ ಅವರನ್ನು ಸಿರಾಜ್ ರನೌಟ್ ಮಾಡಿದರು. ಇದು ಸಹ ಪಂದ್ಯಕ್ಕೆ ತಿರುವು ನೀಡಿತು.

ಪಂಜಾಬ್ ಪರ ಪ್ರಭಾಸಿಮ್ರನ್ ಸಿಂಗ್ 46 ಮತ್ತು ಜಿತೇಶ್ ಶರ್ಮಾ 41 ರನ್‌ಗಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X