ಐಪಿಎಲ್ 2023 | ಪಂಜಾಬ್‌ ಹ್ಯಾಟ್ರಿಕ್‌ ಗೆಲುವಿಗೆ ಅಡ್ಡಿಯಾದ ರಾಹುಲ್‌ ತ್ರಿಪಾಠಿ ಆರ್ಭಟ

Date:

Advertisements

ರಾಹುಲ್‌ ತ್ರಿಪಾಠಿ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ ಅವರ ಸಮಯೋಚಿತ ಆಟದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್‌ ಕೆಂಗ್ಸ್‌ ಹ್ಯಾಟ್ರಿಕ್‌ ಗೆಲುವಿಗೆ ತಡೆ ನೀಡಿ 8 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.

ಹೈದರಾಬಾದಿನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಟೂರ್ನಿಯ 14ನೇ ಪಂದ್ಯದಲ್ಲಿ ಪಂಜಾಬ್‌ ನೀಡಿದ್ದ 144 ರನ್‌ಗಳ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್‌ ತಂಡ 17.1 ಓವರ್‌ಗಳಲ್ಲೇ 2 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು.

ರಾಹುಲ್‌ ತ್ರಿಪಾಠಿ 48 ಚೆಂಡುಗಳಲ್ಲಿ 10 ಬೌಂಡರಿ ಮೂರು ಸಿಕ್ಸರ್‌ನೊಂದಿಗೆ ಅಜೇಯ 74 ರನ್‌ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ 21 ಎಸೆತಗಳಲ್ಲಿ 6 ಆಕರ್ಷಕ ಬೌಂಡರಿಯೊಂದಿಗೆ 37 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು. ಪಂಜಾಬ್‌ಗೆ ಇದು ಮೊದಲ ಸೋಲಾದರೆ, ಟೂರ್ನಿಯಲ್ಲಿ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್‌ ತಂಡ ಪ್ರಥಮ ಗೆಲುವು ದಾಖಲಿಸಿತು.

Advertisements

ಧವನ್‌ ಏಕಾಂಗಿ ಹೋರಾಟ; ಪಂಜಾಬ್‌ ಗೌರವಾನ್ವಿತ ಮೊತ್ತ

ಟಾಸ್ ಸೋತು ಬ್ಯಾಟಿಂಗ್ ಇಳಿದ ಪಂಜಾಬ್ ಕಿಂಗ್ಸ್ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಹೈದರಾಬಾದ್‌ ಬೌಲಿಂಗ್‌ ದಾಳಿಗೆ ಪಂಜಾಬ್ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ಗೆ ಬಂದಷ್ಟೇ ವೇಗದಲ್ಲಿ ಪೆವಿಲಿಯನ್‌ ಕಡೆ ಹೋಗುತ್ತಿದ್ದರು. ಆದರೆ ತಂಡಕ್ಕೆ ಆಸರೆಯಾಗಿದ್ದು ನಾಯಕ ಶಿಖರ್ ಧವನ್. ವಿಕೆಟ್ ಪತನದ ನಡುವೆಯೂ ಶಿಖರ್ ಧವನ್ 66 ಎಸೆತದಲ್ಲಿ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ನೊಂದಿಗೆ ಅಜೇಯ 99 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್  20 ಓವರ್‌ಗಳಲ್ಲಿ ಗೌರವಾನ್ವಿತ 143 ರನ್‌ ಗಳಿಸಿತು.

ಹೈದರಾಬಾರ್‌ ಪರ ಮಾಯಾಂಕ್‌ ಮಾರ್ಕಂಡೆ 15/4, ಮಾರ್ಕೋ ಜಾನ್‌ಸೇನ್‌ 16/2 ಹಾಗೂ ಉಮ್ರಾನ್‌ ಮಲ್ಲಿಕ್ 32/2 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್‌ಗಳಾದರು.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X