ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

Date:

Advertisements

ದೇವದತ್ ಪಡಿಕ್ಕಲ್,ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಶಿಮ್ರಾನ್ ಹೆಟ್ಮೆಯರ್ ಹಾಗೂ ರಿಯಾನ್‌ ಪರಾಗ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್‌ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡ ಪಂಜಾಬ್‌ ಕಿಂಗ್ಸ್ ನೀಡಿದ 188 ರನ್‌ಗಳ ಗುರಿಯನ್ನು 19.4 ಓವರ್‌ಗಳಲ್ಲಿ ತಲುಪಿ ಜಯ ಸಾಧಿಸಿತು. ಅಂತಿಮ ಪಂದ್ಯದಲ್ಲಿ ಪರಾಜಯ ಕಂಡ ಪಂಜಾಬ್‌ ತಂಡ ಟೂರ್ನಿಯಿಂದ ನಿರ್ಗಮಿಸಿತು.

ಆರ್‌ಆರ್‌ ಪರ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ 50(36 ಎಸೆತ, 8 ಬೌಂಡರಿ),ದೇವದತ್ ಪಡೀಕಲ್ 51 (30 ಎಸೆತ, 5 ಬೌಂಡರಿ, 3 ಸಿಕ್ಸರ್ ),ಶಿಮ್ರಾನ್ ಹೆಟ್ಮೆಯರ್ ಅವರು 28 ಚೆಂಡುಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ ಸಿಡಿಸಿದ 46 ರನ್‌ ಹಾಗೂ ಕೊನೆಯಲ್ಲಿ ರಿಯಾನ್‌ ಪರಾಗ್ 12 ಎಸೆತಗಳಲ್ಲಿ 2 ಸಿಕ್ಸರ್ 1 ಬೌಂಡರಿಯೊಂದಿಗೆ 20 ರನ್‌ಗಳ ಬಿರುಸಿನ ಆಟವಾಡಿ ಗೆಲುವಿನ ದಡ ಮುಟ್ಟಿಸಿದರು.

Advertisements

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್ ತಂಡ ಸ್ಯಾಮ್ ಕರನ್, ಜಿತೇಶ್ ಶರ್ಮಾ ಹಾಗೂ ಶಾರುಖ್ ಖಾನ್ ಅವರ ಉತ್ತಮ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್‌ ಕಲೆ ಹಾಕಿತು.

ಮೊದಲ ಓವರ್‌ನಲ್ಲೇ ಇನ್‌ಫಾರ್ಮ್‌ ಬ್ಯಾಟರ್‌ ಪ್ರಭಸಿಮ್ರನ್‌ ಸಿಂಗ್‌ (2) ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌ಗೆ ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ಅಥರ್ವ ತಾಯ್ದೆ (19) ಶೈನಿ ಬೌಲಿಂಗ್‌ನಲ್ಲಿ ಔಟಾದರು. ಸ್ವಲ್ಪ ಕಾಲ ಬ್ಯಾಟ್‌ ಬೀಸಿದ ಶಿಖರ್‌ ಧವನ್ (19) ಕೂಡ ಜಂಪಾ ಬೌಲಿಂಗ್‌ನಲ್ಲಿ ಎಲ್‌ಬಿ ಆದರು.

ಲಿಯಾಮ್‌ ಲಿವಿಂಗ್‌ಸ್ಟೋನ್‌ (9) ವಿಕೆಟ್‌ ಪತನದೊಂದಿಗೆ ಪಂಜಾಬ್‌ 50ಕ್ಕೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಇನಿಂಗ್ಸ್ ಮಧ್ಯದ ಮತ್ತು ಸ್ಲಾಗ್‌ ಓವರ್‌ಗಳಲ್ಲಿ ಸಿಡಿದೆದ್ದ ಸ್ಯಾಮ್‌ ಕರನ್ (49 ಅಜೇಯ), ಜಿತೇಶ್‌ ಶರ್ಮಾ (44) ಮತ್ತು ಶಾರುಖ್‌ ಖಾನ್ (41 ಅಜೇಯ) ರಾಯಲ್ಸ್‌ ಬೌಲರ್‌ಗಳ ಬೆವರಳಿಸಿ ಸವಾಲಿನ ಮೊತ್ತ ತಂದುಕೊಟ್ಟರು.

ರಾಯಲ್ಸ್‌ ಪರ ವೇಗಿ ನವದೀಪ್‌ ಸೈನಿ (40ಕ್ಕೆ 3) ಯಶಸ್ವಿ ಬೌಲರ್‌ ಎನಿಸಿದರು. ಬೆನ್ನು ನೋವಿನ ಕಾರಣದಿಂದಾಗಿ ಇಂದಿನ ಪಂದ್ಯದಲ್ಲಿ ಸ್ಪಿನ್ನರ್‌ ಅಶ್ವಿನ್‌ ಆಡಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X