ಐಪಿಎಲ್ 2023 | ಬೌಲ್ಟ್, ಅಶ್ವಿನ್‌ ದಾಳಿಗೆ ಡೆಲ್ಲಿ ಪತನ; ವಾರ್ನರ್‌ ಪಡೆಗೆ ಸತತ ಮೂರನೇ ಸೋಲು

Date:

Advertisements

ವೇಗದ ಬೌಲರ್‌ ಟ್ರೆಂಟ್ ಬೌಲ್ಟ್ ಹಾಗೂ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್‌, ಆರ್‌ ಚಾಹಲ್ ಅವರ ದಾಳಿಗೆ ಸಿಲುಕಿದ ಡೆಲ್ಲಿ ಕ್ಯಾಪಿಟಲ್ಸ್ 57 ರನ್‌ಗಳ ಅಂತರದಲ್ಲಿ ಸೋಲಿಗೆ ಶರಣಾಯಿತು.

ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 16ನೇ ಆವೃತ್ತಿಯ 11ನೇ ಪಂದ್ಯದಲ್ಲಿ ರಾಜಸ್ಥಾನ್‌ ನೀಡಿದ 200 ನ್‌ಗಳ ಸವಾಲನ್ನು ಬೆನ್ನಟ್ಟಿದ ಡೆಲ್ಲಿ ತಂಡ 9 ವಿಕೆಟ್ ನಷ್ಟಕ್ಕೆ 142 ರನ್‌ಗಳಷ್ಟೆ ಗಳಿಸಲು ಶಕ್ತವಾಯಿತು. ಇದರೊಂದಿಗೆ ಡೆಲ್ಲಿ ಟೂರ್ನಿಯಲ್ಲಿ ಸತತ ಮೂರು ಸೋಲು ಕಂಡಿತು.

ನಾಯಕ ಡೇವಿಡ್ ವಾರ್ನರ್‌ ಅರ್ಧ ಶತಕ 65 (55 ಎಸೆತ, 7 ಬೌಂಡರಿ) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಲಿತ್‌ ಯಾದವ್ 38 (24 ಎಸೆತ, 5 ಬೌಂಡರಿ) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸಮನ್‌ಗಳ್ಯಾರೂ ಪ್ರತಿರೋಧ ತೋರದೆ ಪೆವಿಲಿಯನ್‌ ಕಡೆ ಹೆಜ್ಜೆ ಹಾಕಿದರು.

Advertisements

ಟ್ರೆಂಟ್ ಬೌಲ್ಟ್ 29/3, ಆರ್‌ ಚಾಹಲ್ 27/3 ಹಾಗೂ ಆರ್‌ ಅಶ್ವಿನ್ 25/2 ವಿಕೆಟ್ ಕಬಳಿಸಿ ರಾಜಸ್ಥಾನ ಗೆಲುವಿನ ರೂವಾರಿಯಾದರು.

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್‌, ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಅವರ ಅರ್ಧ ಶತಕದ ಬಲದಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ ಕಲೆ ಹಾಕಿತು. ಇವರಿಬ್ಬರು ಯಶಸ್ವಿ ಜೈಸ್ವಾಲ್‌ 60 ರನ್‌ (31 ಚೆಂಡು,11 ಬೌಂಡರಿ, 1 ಸಿಕ್ಸರ್) ಮತ್ತು ಜಾಸ್‌ ಬಟ್ಲರ್‌ 79 ರನ್‌ (51 ಎಸೆತ, 11 ಬೌಂಡರಿ, 1 ಸಿಕ್ಸರ್) ಪೇರಿಸುವ ಮೂಲಕ ಮೊದಲ ವಿಕೆಟ್‌ಗೆ 8.3 ಓವರ್‌ಗಳಲ್ಲೇ 98 ರನ್‌ ಗಳಿಸಿದ್ದರು.

ಕೊನೆಯಲ್ಲಿ ಶಿಮ್ರಾನ್ ಹೆಟ್ಮೆಯರ್ 21 ಎಸೆತಗಳಲ್ಲಿ 4 ಸಿಕ್ಸರ್‌ ಮತ್ತು ಒಂದು ಬೌಂಡರಿ ಮೂಲಕ 39 ರನ್‌ ಗಳಿಸಿ ರಾಯಲ್ಸ್‌ ಮೊತ್ತವನ್ನು 199ಕ್ಕೆ ಕೊಂಡೊಯ್ದರು. ಡೆಲ್ಲಿ ಪರ ಮುಕೇಶ್‌ ಕುಮಾರ್‌ 2 ಮತ್ತು ಕುಲ್‌ದೀಪ್‌ ಯಾದವ್‌ ಮತ್ತು ರೋವ್‌ಮನ್‌ ಪೊವೆಲ್‌ ತಲಾ ಒಂದು ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X